ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.

ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm