ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.

ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 05:42 pm
HK News Staffer
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm