ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.

ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm