ಬ್ರೇಕಿಂಗ್ ನ್ಯೂಸ್
30-10-22 06:02 pm Mangaluru Correspondent ಕ್ರೈಂ
ಸುಳ್ಯ, ಅ.30: ಗಂಡು ಮಗು ಹೆತ್ತವರನ್ನು ನೋಡಿಕೊಳ್ಳಲ್ಲ ಎಂದು ಹತ್ತು ತಿಂಗಳ ನವಜಾತ ಗಂಡು ಶಿಶುವನ್ನು ತಾಯಿಯೇ ಬಾವಿಗೆಸೆದು ಕೊಂದು ಹಾಕಿದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೂತ್ಕುಂಜ ಎಂಬಲ್ಲಿ ನಡೆದಿದೆ.
ಕೂತ್ಕುಂಜ ನಿವಾಸಿ ಪವಿತ್ರಾ ಎಂಬಾಕೆ ಅ.19ರಂದು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಗರ್ಭಿಣಿಯಾಗಿದ್ದಾಗಲೇ ನನಗೆ ಹೆಣ್ಣು ಮಗು ಆಗುತ್ತದೆ, ಗಂಡು ಮಕ್ಕಳು ತಂದೆ, ತಾಯಿಯನ್ನು ನೋಡಿಕೊಳ್ಳುವುದಿಲ್ಲ. ಹೆಣ್ಣು ಮಗುವೆಂದರೆ ತುಂಬ ಇಷ್ಟ ಎಂದು ಹೇಳಿಕೊಂಡಿದ್ದಳು. ತಾನು ಹೆತ್ತಿದ್ದು ಗಂಡು ಮಗು ಎಂದು ತಿಳಿದು ಅದಕ್ಕೆ ಮೊಲೆ ಹಾಲು ನೀಡದೇ ಸತಾಯಿಸುತ್ತಿದ್ದಳು.
ಅ.29ರಂದು ಸಂಜೆ ಈ ಗಂಡು ಮಗು ತನಗೆ ಇಷ್ಟವಿಲ್ಲದಿದ್ದರೂ ಹುಟ್ಟಿದೆ ಎಂದು ಹೇಳಿ ಮಗುವನ್ನು ಎತ್ತಿಕೊಂಡು ಮನೆಯಿಂದ ಹೊರಗೆ ಬಂದು ಅಂಗಳದಲ್ಲಿರುವ ಬಾವಿಗೆ ಎಸೆದಿದ್ದಾಳೆ. ಬಳಿಕ ಮನೆಯ ಒಳಗಡೆ ಓಡಿದ್ದಾಳೆ. ಮನೆಯಲ್ಲಿದ್ದ ಆಕೆಯ ಅಣ್ಣನ ಪತ್ನಿ ರಂಜಿತಾ ಇದನ್ನು ನೋಡಿದ್ದು, ತನ್ನ ಪತಿಗೆ ವಿಷಯ ತಿಳಿಸಿದ್ದಾಳೆ. ಪತಿ ಅರುಣ್ ಕುಮಾರ್ ಮತ್ತು ಆತನ ಸ್ನೇಹಿತರು ಬಂದು ಬಾವಿಯಿಂದ ಮಗುವನ್ನು ಎತ್ತಿ ಬಳಿಕ ಪಂಜ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು, ಅಷ್ಟರಲ್ಲಿ ಮಗು ಮೃತಪಟ್ಟಿತ್ತು.
ಪವಿತ್ರಾ ನಾಲ್ಕು ವರ್ಷದ ಹಿಂದೆ ಬೆಂಗಳೂರು ಮೂಲದ ಹರೀಶ್ ಎಂಬಾತನನ್ನು ಮದುವೆಯಾಗಿದ್ದು ಆನಂತರ ಆತನಿಗೆ ವಿಚ್ಛೇದನ ಕೊಟ್ಟು ತುಮಕೂರು ಮೂಲದ ಮಣಿಕಂಠ ಎಂಬವನನ್ನು ಒಂದು ವರ್ಷದ ಹಿಂದೆ ಮದುವೆಯಾಗಿದ್ದಳು. ಕೆಲ ಕಾಲ ಆತನ ಜೊತೆಗಿದ್ದು ಹುಷಾರಿಲ್ಲವೆಂದು ತವರು ಮನೆಗೆ ಬಂದಿದ್ದಳು. ಈ ವೇಳೆ, ಗರ್ಭಿಣಿಯಾಗಿದ್ದ ಪವಿತ್ರಾ ತನಗೆ ಹೆಣ್ಣು ಮಗುವೇ ಆಗಬೇಕೆಂದು ಹಂಬಲಿಸುತ್ತಿದ್ದಳು. ಇಷ್ಟದಂತೆ ಹೆಣ್ಣು ಮಗುವಾಗದೆ ಗಂಡು ಮಗುವನ್ನು ಹೆತ್ತಿದ್ದರ ಕೋಪದಲ್ಲಿ ಸ್ವತಃ ತಾಯಿಯೇ ತನ್ನ ಹಸುಗೂಸನ್ನು ಬಾವಿಗೆಸೆದು ಕೊಂದಿದ್ದಾಳೆ. ಈ ಬಗ್ಗೆ ಘಟನೆಯನ್ನು ಕಣ್ಣಾರೆ ಕಂಡಿದ್ದ ರಂಜಿತಾ ಸುಬ್ರಹ್ಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಪವಿತ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
Sullia 10 months old baby thrown to the well by mother for giving birth to a boy child in subramanya, Mangalore.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm