ಬ್ರೇಕಿಂಗ್ ನ್ಯೂಸ್
30-10-22 06:02 pm Mangaluru Correspondent ಕ್ರೈಂ
ಸುಳ್ಯ, ಅ.30: ಗಂಡು ಮಗು ಹೆತ್ತವರನ್ನು ನೋಡಿಕೊಳ್ಳಲ್ಲ ಎಂದು ಹತ್ತು ತಿಂಗಳ ನವಜಾತ ಗಂಡು ಶಿಶುವನ್ನು ತಾಯಿಯೇ ಬಾವಿಗೆಸೆದು ಕೊಂದು ಹಾಕಿದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೂತ್ಕುಂಜ ಎಂಬಲ್ಲಿ ನಡೆದಿದೆ.
ಕೂತ್ಕುಂಜ ನಿವಾಸಿ ಪವಿತ್ರಾ ಎಂಬಾಕೆ ಅ.19ರಂದು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಗರ್ಭಿಣಿಯಾಗಿದ್ದಾಗಲೇ ನನಗೆ ಹೆಣ್ಣು ಮಗು ಆಗುತ್ತದೆ, ಗಂಡು ಮಕ್ಕಳು ತಂದೆ, ತಾಯಿಯನ್ನು ನೋಡಿಕೊಳ್ಳುವುದಿಲ್ಲ. ಹೆಣ್ಣು ಮಗುವೆಂದರೆ ತುಂಬ ಇಷ್ಟ ಎಂದು ಹೇಳಿಕೊಂಡಿದ್ದಳು. ತಾನು ಹೆತ್ತಿದ್ದು ಗಂಡು ಮಗು ಎಂದು ತಿಳಿದು ಅದಕ್ಕೆ ಮೊಲೆ ಹಾಲು ನೀಡದೇ ಸತಾಯಿಸುತ್ತಿದ್ದಳು.
ಅ.29ರಂದು ಸಂಜೆ ಈ ಗಂಡು ಮಗು ತನಗೆ ಇಷ್ಟವಿಲ್ಲದಿದ್ದರೂ ಹುಟ್ಟಿದೆ ಎಂದು ಹೇಳಿ ಮಗುವನ್ನು ಎತ್ತಿಕೊಂಡು ಮನೆಯಿಂದ ಹೊರಗೆ ಬಂದು ಅಂಗಳದಲ್ಲಿರುವ ಬಾವಿಗೆ ಎಸೆದಿದ್ದಾಳೆ. ಬಳಿಕ ಮನೆಯ ಒಳಗಡೆ ಓಡಿದ್ದಾಳೆ. ಮನೆಯಲ್ಲಿದ್ದ ಆಕೆಯ ಅಣ್ಣನ ಪತ್ನಿ ರಂಜಿತಾ ಇದನ್ನು ನೋಡಿದ್ದು, ತನ್ನ ಪತಿಗೆ ವಿಷಯ ತಿಳಿಸಿದ್ದಾಳೆ. ಪತಿ ಅರುಣ್ ಕುಮಾರ್ ಮತ್ತು ಆತನ ಸ್ನೇಹಿತರು ಬಂದು ಬಾವಿಯಿಂದ ಮಗುವನ್ನು ಎತ್ತಿ ಬಳಿಕ ಪಂಜ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು, ಅಷ್ಟರಲ್ಲಿ ಮಗು ಮೃತಪಟ್ಟಿತ್ತು.
ಪವಿತ್ರಾ ನಾಲ್ಕು ವರ್ಷದ ಹಿಂದೆ ಬೆಂಗಳೂರು ಮೂಲದ ಹರೀಶ್ ಎಂಬಾತನನ್ನು ಮದುವೆಯಾಗಿದ್ದು ಆನಂತರ ಆತನಿಗೆ ವಿಚ್ಛೇದನ ಕೊಟ್ಟು ತುಮಕೂರು ಮೂಲದ ಮಣಿಕಂಠ ಎಂಬವನನ್ನು ಒಂದು ವರ್ಷದ ಹಿಂದೆ ಮದುವೆಯಾಗಿದ್ದಳು. ಕೆಲ ಕಾಲ ಆತನ ಜೊತೆಗಿದ್ದು ಹುಷಾರಿಲ್ಲವೆಂದು ತವರು ಮನೆಗೆ ಬಂದಿದ್ದಳು. ಈ ವೇಳೆ, ಗರ್ಭಿಣಿಯಾಗಿದ್ದ ಪವಿತ್ರಾ ತನಗೆ ಹೆಣ್ಣು ಮಗುವೇ ಆಗಬೇಕೆಂದು ಹಂಬಲಿಸುತ್ತಿದ್ದಳು. ಇಷ್ಟದಂತೆ ಹೆಣ್ಣು ಮಗುವಾಗದೆ ಗಂಡು ಮಗುವನ್ನು ಹೆತ್ತಿದ್ದರ ಕೋಪದಲ್ಲಿ ಸ್ವತಃ ತಾಯಿಯೇ ತನ್ನ ಹಸುಗೂಸನ್ನು ಬಾವಿಗೆಸೆದು ಕೊಂದಿದ್ದಾಳೆ. ಈ ಬಗ್ಗೆ ಘಟನೆಯನ್ನು ಕಣ್ಣಾರೆ ಕಂಡಿದ್ದ ರಂಜಿತಾ ಸುಬ್ರಹ್ಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಪವಿತ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
Sullia 10 months old baby thrown to the well by mother for giving birth to a boy child in subramanya, Mangalore.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm