ಬ್ರೇಕಿಂಗ್ ನ್ಯೂಸ್
02-11-22 10:20 pm HK News Desk ಕ್ರೈಂ
ಕಲಬುರಗಿ, ನ.2 : ಇತ್ತೀಚೆಗೆ ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿಯನ್ನು ಶಿಕ್ಷಕನೇ ಅತ್ಯಾಚಾರಗೈದು ಕೊಲೆಗೈದ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧಿಸಿ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಆಳಂದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನ.1ರಂದು ಘಟನೆ ನಡೆದಿದೆ. ಮಧ್ಯಾಹ್ನ 3ರಿಂದ 4 ಗಂಟೆಯ ನಡುವೆ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯ ಬಳಿ ಬರ್ಹಿದೆಸೆಗೆ ಹೋಗಿದ್ದಾಗ ಯುವಕನೊಬ್ಬ ಕಬ್ಬಿನ ಗದ್ದೆಗೆ ಆಕೆಯನ್ನು ಎಳೆದೊಯ್ದಿದ್ದಾನೆ. ಗದ್ದೆಯ ನಡುವೆ ಹಿಡಿದಿಟ್ಟು ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದು ಬಳಿಕ ಬಾಲಕಿಯ ಎದೆಗೆ ಕಲ್ಲಿನಿಂದ ಜಜ್ಜಿ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಶವ ಬಿಟ್ಟು ಪರಾರಿಯಾಗಿದ್ದ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲಿಸರು ತನಿಖೆ ಕೈಗೊಂಡಿದ್ದರು.
ಕೃತ್ಯ ಎಸಗಿದ ಆರೋಪಿಯೂ ಅಪ್ರಾಪ್ತನಾಗಿದ್ದು ಹೀನ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಬಂಧಿಸಲು ತಂಡ ರಚಿಸಿದ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರು ಜನ ಅಪ್ರಾಪ್ತ ಬಾಲಕರು ಸೇರಿ ರೇಪ್ ಮಾಡಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ. ಬಾಲಕರು ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ, ಅದೇ ರೀತಿಯಲ್ಲಿ ಮಾಡಲು ಹೋಗಿದ್ದರು. ಅತ್ಯಾಚಾರ ಎಸಗಿ ಆರೋಪಿಗಳು ಕೊಲೆ ಮಾಡಿದ್ದರು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Another brutal rape and murder reported in Kalburgi after Mandya.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm