ಬ್ರೇಕಿಂಗ್ ನ್ಯೂಸ್
02-11-22 10:20 pm HK News Desk ಕ್ರೈಂ
ಕಲಬುರಗಿ, ನ.2 : ಇತ್ತೀಚೆಗೆ ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿಯನ್ನು ಶಿಕ್ಷಕನೇ ಅತ್ಯಾಚಾರಗೈದು ಕೊಲೆಗೈದ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧಿಸಿ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಆಳಂದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನ.1ರಂದು ಘಟನೆ ನಡೆದಿದೆ. ಮಧ್ಯಾಹ್ನ 3ರಿಂದ 4 ಗಂಟೆಯ ನಡುವೆ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯ ಬಳಿ ಬರ್ಹಿದೆಸೆಗೆ ಹೋಗಿದ್ದಾಗ ಯುವಕನೊಬ್ಬ ಕಬ್ಬಿನ ಗದ್ದೆಗೆ ಆಕೆಯನ್ನು ಎಳೆದೊಯ್ದಿದ್ದಾನೆ. ಗದ್ದೆಯ ನಡುವೆ ಹಿಡಿದಿಟ್ಟು ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದು ಬಳಿಕ ಬಾಲಕಿಯ ಎದೆಗೆ ಕಲ್ಲಿನಿಂದ ಜಜ್ಜಿ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಶವ ಬಿಟ್ಟು ಪರಾರಿಯಾಗಿದ್ದ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲಿಸರು ತನಿಖೆ ಕೈಗೊಂಡಿದ್ದರು.
ಕೃತ್ಯ ಎಸಗಿದ ಆರೋಪಿಯೂ ಅಪ್ರಾಪ್ತನಾಗಿದ್ದು ಹೀನ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಬಂಧಿಸಲು ತಂಡ ರಚಿಸಿದ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರು ಜನ ಅಪ್ರಾಪ್ತ ಬಾಲಕರು ಸೇರಿ ರೇಪ್ ಮಾಡಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ. ಬಾಲಕರು ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ, ಅದೇ ರೀತಿಯಲ್ಲಿ ಮಾಡಲು ಹೋಗಿದ್ದರು. ಅತ್ಯಾಚಾರ ಎಸಗಿ ಆರೋಪಿಗಳು ಕೊಲೆ ಮಾಡಿದ್ದರು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Another brutal rape and murder reported in Kalburgi after Mandya.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm