ಬ್ರೇಕಿಂಗ್ ನ್ಯೂಸ್
02-11-22 10:20 pm HK News Desk ಕ್ರೈಂ
ಕಲಬುರಗಿ, ನ.2 : ಇತ್ತೀಚೆಗೆ ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿಯನ್ನು ಶಿಕ್ಷಕನೇ ಅತ್ಯಾಚಾರಗೈದು ಕೊಲೆಗೈದ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧಿಸಿ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಆಳಂದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನ.1ರಂದು ಘಟನೆ ನಡೆದಿದೆ. ಮಧ್ಯಾಹ್ನ 3ರಿಂದ 4 ಗಂಟೆಯ ನಡುವೆ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯ ಬಳಿ ಬರ್ಹಿದೆಸೆಗೆ ಹೋಗಿದ್ದಾಗ ಯುವಕನೊಬ್ಬ ಕಬ್ಬಿನ ಗದ್ದೆಗೆ ಆಕೆಯನ್ನು ಎಳೆದೊಯ್ದಿದ್ದಾನೆ. ಗದ್ದೆಯ ನಡುವೆ ಹಿಡಿದಿಟ್ಟು ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದು ಬಳಿಕ ಬಾಲಕಿಯ ಎದೆಗೆ ಕಲ್ಲಿನಿಂದ ಜಜ್ಜಿ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಶವ ಬಿಟ್ಟು ಪರಾರಿಯಾಗಿದ್ದ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲಿಸರು ತನಿಖೆ ಕೈಗೊಂಡಿದ್ದರು.
ಕೃತ್ಯ ಎಸಗಿದ ಆರೋಪಿಯೂ ಅಪ್ರಾಪ್ತನಾಗಿದ್ದು ಹೀನ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಬಂಧಿಸಲು ತಂಡ ರಚಿಸಿದ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರು ಜನ ಅಪ್ರಾಪ್ತ ಬಾಲಕರು ಸೇರಿ ರೇಪ್ ಮಾಡಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ. ಬಾಲಕರು ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ, ಅದೇ ರೀತಿಯಲ್ಲಿ ಮಾಡಲು ಹೋಗಿದ್ದರು. ಅತ್ಯಾಚಾರ ಎಸಗಿ ಆರೋಪಿಗಳು ಕೊಲೆ ಮಾಡಿದ್ದರು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Another brutal rape and murder reported in Kalburgi after Mandya.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm