ಬ್ರೇಕಿಂಗ್ ನ್ಯೂಸ್
03-11-22 05:02 pm Mangalore Correspondent ಕ್ರೈಂ
ಮಂಗಳೂರು, ನ.3 : ಕೇರಳದಿಂದ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ –ದೇವಿಪುರ ರಸ್ತೆಯ ತಚ್ಚಣಿ ಬಳಿ ಮೂವರನ್ನು ಬಂಧಿಸಿದ್ದಾರೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಫಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42) ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತರು. ಕೇರಳ ಭಾಗದಿಂದ ಕಾರಿನಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಕೈಗೊಂಡಿದ್ದರು.
ಘಟನೆ ಸಂಬಂಧಿಸಿ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ ರೂ. 7.17 ಲಕ್ಷ ಅಂದಾಜಿಸಲಾಗಿದೆ.
ಆರೋಪಿಗಳು ಮಾದಕ ವಸ್ತುಗಳನ್ನು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಕಾರಿನಲ್ಲಿ ತುಂಬಿಸಿ ತರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತ ಅಬ್ದುಲ್ ರೆಹಮಾನ್ ಅರ್ಫಾನ್ ವಿರುದ್ಧ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್ ಜಲೀಲ್ ವಿರುದ್ದ ಈ ಹಿಂದೆ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
illegal purchase of drugs from Kerala, three arrested by Mangalore police at talapady border. The arrested three are residents of Mangalore. The CCB police who received details nabbed the peddlers at the Kerala border.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm