ಬ್ರೇಕಿಂಗ್ ನ್ಯೂಸ್
03-11-22 05:02 pm Mangalore Correspondent ಕ್ರೈಂ
ಮಂಗಳೂರು, ನ.3 : ಕೇರಳದಿಂದ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ –ದೇವಿಪುರ ರಸ್ತೆಯ ತಚ್ಚಣಿ ಬಳಿ ಮೂವರನ್ನು ಬಂಧಿಸಿದ್ದಾರೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಫಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42) ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತರು. ಕೇರಳ ಭಾಗದಿಂದ ಕಾರಿನಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಕೈಗೊಂಡಿದ್ದರು.

ಘಟನೆ ಸಂಬಂಧಿಸಿ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ ರೂ. 7.17 ಲಕ್ಷ ಅಂದಾಜಿಸಲಾಗಿದೆ.
ಆರೋಪಿಗಳು ಮಾದಕ ವಸ್ತುಗಳನ್ನು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಕಾರಿನಲ್ಲಿ ತುಂಬಿಸಿ ತರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಅಬ್ದುಲ್ ರೆಹಮಾನ್ ಅರ್ಫಾನ್ ವಿರುದ್ಧ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್ ಜಲೀಲ್ ವಿರುದ್ದ ಈ ಹಿಂದೆ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
illegal purchase of drugs from Kerala, three arrested by Mangalore police at talapady border. The arrested three are residents of Mangalore. The CCB police who received details nabbed the peddlers at the Kerala border.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm