ಬ್ರೇಕಿಂಗ್ ನ್ಯೂಸ್
03-11-22 05:02 pm Mangalore Correspondent ಕ್ರೈಂ
ಮಂಗಳೂರು, ನ.3 : ಕೇರಳದಿಂದ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ –ದೇವಿಪುರ ರಸ್ತೆಯ ತಚ್ಚಣಿ ಬಳಿ ಮೂವರನ್ನು ಬಂಧಿಸಿದ್ದಾರೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಫಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42) ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತರು. ಕೇರಳ ಭಾಗದಿಂದ ಕಾರಿನಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಕೈಗೊಂಡಿದ್ದರು.

ಘಟನೆ ಸಂಬಂಧಿಸಿ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ ರೂ. 7.17 ಲಕ್ಷ ಅಂದಾಜಿಸಲಾಗಿದೆ.
ಆರೋಪಿಗಳು ಮಾದಕ ವಸ್ತುಗಳನ್ನು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಕಾರಿನಲ್ಲಿ ತುಂಬಿಸಿ ತರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಅಬ್ದುಲ್ ರೆಹಮಾನ್ ಅರ್ಫಾನ್ ವಿರುದ್ಧ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್ ಜಲೀಲ್ ವಿರುದ್ದ ಈ ಹಿಂದೆ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
illegal purchase of drugs from Kerala, three arrested by Mangalore police at talapady border. The arrested three are residents of Mangalore. The CCB police who received details nabbed the peddlers at the Kerala border.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm