ಬ್ರೇಕಿಂಗ್ ನ್ಯೂಸ್
03-11-22 05:02 pm Mangalore Correspondent ಕ್ರೈಂ
ಮಂಗಳೂರು, ನ.3 : ಕೇರಳದಿಂದ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ –ದೇವಿಪುರ ರಸ್ತೆಯ ತಚ್ಚಣಿ ಬಳಿ ಮೂವರನ್ನು ಬಂಧಿಸಿದ್ದಾರೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಫಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42) ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತರು. ಕೇರಳ ಭಾಗದಿಂದ ಕಾರಿನಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಕೈಗೊಂಡಿದ್ದರು.

ಘಟನೆ ಸಂಬಂಧಿಸಿ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ ರೂ. 7.17 ಲಕ್ಷ ಅಂದಾಜಿಸಲಾಗಿದೆ.
ಆರೋಪಿಗಳು ಮಾದಕ ವಸ್ತುಗಳನ್ನು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಕಾರಿನಲ್ಲಿ ತುಂಬಿಸಿ ತರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಅಬ್ದುಲ್ ರೆಹಮಾನ್ ಅರ್ಫಾನ್ ವಿರುದ್ಧ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್ ಜಲೀಲ್ ವಿರುದ್ದ ಈ ಹಿಂದೆ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
illegal purchase of drugs from Kerala, three arrested by Mangalore police at talapady border. The arrested three are residents of Mangalore. The CCB police who received details nabbed the peddlers at the Kerala border.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am