ಬ್ರೇಕಿಂಗ್ ನ್ಯೂಸ್
03-11-22 05:02 pm Mangalore Correspondent ಕ್ರೈಂ
ಮಂಗಳೂರು, ನ.3 : ಕೇರಳದಿಂದ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ –ದೇವಿಪುರ ರಸ್ತೆಯ ತಚ್ಚಣಿ ಬಳಿ ಮೂವರನ್ನು ಬಂಧಿಸಿದ್ದಾರೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಫಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42) ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತರು. ಕೇರಳ ಭಾಗದಿಂದ ಕಾರಿನಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಕೈಗೊಂಡಿದ್ದರು.

ಘಟನೆ ಸಂಬಂಧಿಸಿ ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೌಲ್ಯ ರೂ. 7.17 ಲಕ್ಷ ಅಂದಾಜಿಸಲಾಗಿದೆ.
ಆರೋಪಿಗಳು ಮಾದಕ ವಸ್ತುಗಳನ್ನು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಕಾರಿನಲ್ಲಿ ತುಂಬಿಸಿ ತರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಅಬ್ದುಲ್ ರೆಹಮಾನ್ ಅರ್ಫಾನ್ ವಿರುದ್ಧ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್ ಜಲೀಲ್ ವಿರುದ್ದ ಈ ಹಿಂದೆ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
illegal purchase of drugs from Kerala, three arrested by Mangalore police at talapady border. The arrested three are residents of Mangalore. The CCB police who received details nabbed the peddlers at the Kerala border.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm