ಬ್ರೇಕಿಂಗ್ ನ್ಯೂಸ್
06-11-22 02:28 pm HK News Desk ಕ್ರೈಂ
ಪಾಟ್ನಾ, ನ.6: ವಾಮಾಚಾರ ಮಾಡುತ್ತಿದ್ದಳೆಂದು ಆರೋಪಿಸಿ ಮಹಿಳೆಯೊಬ್ಬಳನ್ನು ಥಳಿಸಿದ್ದಲ್ಲದೆ, ಆಕೆಯನ್ನು ಮನೆಯಲ್ಲೇ ಕೂಡಿಹಾಕಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಆಘಾತಕಾರಿ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಮೃತ ಮಹಿಳೆಯನ್ನು ಅರ್ಜುನ್ ದಾಸ್ ಎಂಬವರ ಪತ್ನಿ ರೀಟಾ ದೇವಿ (45) ಎಂದು ಗುರುತಿಸಲಾಗಿದೆ. ನೆರೆಹೊರೆಯ ಮನೆಯವರೇ ಸೇರಿ ಮಹಿಳೆಗೆ ಹಲ್ಲೆಗೈದು ನಂತರ ಮನೆಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಮಹಿಳೆಯರನ್ನು ಬಂಧಿಸಲಾಗಿದೆ.
ತಿಂಗಳ ಹಿಂದಷ್ಟೇ ಭುಯಾನ್ ಸಮುದಾಯದ ಪರಮೇಶ್ವರ್ ಎಂಬ ವ್ಯಕ್ತಿ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಆದರೆ ಅವರ ಕುಟುಂಬದವರು ರೀಟಾ ದೇವಿ ಈತನಿಗೆ ವಾಮಾಚಾರ ಮಾಡಿ ಕೊಲೆ ಮಾಡಿದ್ದಾಳೆ ಎಂದು ದೂರಿದ್ದರು. ಇದರಿಂದ ಎರಡು ಕುಟುಂಬಗಳ ನಡುವೆ ವೈರತ್ವ ಉಂಟಾಗಿತ್ತು. ಪರಮೇಶ್ವರ್ ಸಂಬಂಧಿಕರು ಪ್ರತಿಯಾಗಿ ದೂರದ ಜಾರ್ಖಂಡ್ನಿಂದ ವಾಮಾಚಾರ ಮಾಡುವ ವ್ಯಕ್ತಿಯನ್ನು ಕರೆಸಿದ್ದರು. ಆತ, ರೀಟಾಗೆ ಪರಮೇಶ್ವರ್ ಕೊಲೆಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
ಈ ನಡುವೆ, ಪರಮೇಶ್ವರ್ ಕುಟುಂಬಸ್ಥರು ರೀಟಾಳ ಮನೆಗೆ ಬಂದು ಥಳಿಸಿದ್ದಾರೆ. ಈ ವೇಳೆ, ರೀಟಾ ಪತಿ ಅರ್ಜುನ್ ದಾಸ್ ಮತ್ತು ಮಕ್ಕಳು ಓಡಿ ತಪ್ಪಿಸಿಕೊಂಡಿದ್ದಾರೆ. ಆದರೆ ಮಹಿಳೆಯನ್ನು ಮನೆಯಲ್ಲಿ ಕೂಡಿಹಾಕಿ ಥಳಿಸಿದ್ದು ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಈ ವೇಳೆ, ಮನೆಯ ಗ್ಯಾಸ್ ಓಪನ್ ಮಾಡಿ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಇದರಿಂದ ಮಹಿಳೆ ಸಜೀವ ದಹನವಾಗಿದ್ದಾಳೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಅಲ್ಲಿನ ಜನರು ಹಲ್ಲೆಗೆ ಮುಂದಾಗಿದ್ದರು. ಬಳಿಕ ಹೆಚ್ಚುವರಿ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.
The incident happened in a remote hilly region of Pachmah village under Maigra police station limits bordering the forests of Jharkhand. Locals attacked and forced the local police team to return that had reached the spot to rescue the woman, identified as Rita Devi, 45, wife of Arjun Das.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm