ಬ್ರೇಕಿಂಗ್ ನ್ಯೂಸ್
09-11-22 07:03 pm Mangalore Correspondent ಕ್ರೈಂ
ಮಂಗಳೂರು, ನ.9: 19 ವರ್ಷದ ಯುವಕನನ್ನು ಸಲಿಂಗಕಾಮಕ್ಕಾಗಿ ನಿರ್ಜನ ಪ್ರದೇಶದ ಗುಡ್ಡಕ್ಕೆ ಕೊಂಡೊಯ್ದು ಬಳಿಕ ಆತನನ್ನು ಪೆಟ್ರೋಲ್ ಸುರಿದು ಕೊಲೆಗೈದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೋಳಂತೂರು ನಿವಾಸಿ, ಆಟೋ ಚಾಲಕನಾಗಿದ್ದ ಅಬ್ದುಲ್ ರಹಿಮಾನ್ (54) ಬಂಧಿತ ಆರೋಪಿ. ಕೆಲವು ದಿನಗಳ ಹಿಂದೆ ಸುರಿಬೈಲು ನಿವಾಸಿ ಅಬ್ದುಲ್ ಸಮಾದ್ ಎಂಬ 19 ವರ್ಷದ ಯುವಕ ನಾಪತ್ತೆಯಾಗಿದ್ದ. ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ಯುವಕ ಊರಿಗೆ ಬಂದಿದ್ದಾಗ ನಾಪತ್ತೆಯಾಗಿದ್ದರಿಂದ ವಿಟ್ಲ ಪೊಲೀಸರಿಗೆ ಹೆತ್ತವರು ದೂರು ನೀಡಿದ್ದರು.

ಈ ನಡುವೆ, ನ.7ರಂದು ಅಬ್ದುಲ್ ರಹಿಮಾನ್ ತನ್ನ ಆಟೋದಲ್ಲಿ ಪೆಟ್ರೋಲ್ ಇಲ್ಲ, ತುರ್ತಾಗಿ ಒಂದು ಕಡೆ ಹೋಗಲಿಕ್ಕಿದೆ ಎಂದು ಹೇಳಿ ತನ್ನ ಸಂಬಂಧಿಕ ಸಲೀಂ ಎಂಬಾತನಲ್ಲಿ ಹೇಳಿದ್ದ. ಇದರಂತೆ, ಸಲೀಂ ಜೊತೆಗೆ ಬೈಕಿನಲ್ಲಿ ಇರಾ ಪದವು ಕಡೆಗೆ ಹೋಗಿದ್ದು ಅಲ್ಲಿ ಬೈಕ್ ನಿಲ್ಲಿಸಿ, ಅಬ್ದುಲ್ ಸಮಾದ್ ನನ್ನು ಕೊಲೆಗೈದಿರುವ ವಿಷಯ ತಿಳಿಸಿದ್ದಾನೆ. ತಕರಾರು ಉಂಟಾಗಿ ಪೆಟ್ರೋಲ್ ಸುರಿದು ಕೊಲೆ ಮಾಡಿದ್ದೇನೆ, ಆತನನ್ನು ಹೊಂಡದಲ್ಲಿ ಮುಚ್ಚಿ ಮಣ್ಣು ಮಾಡಲು ಸಹಕರಿಸುವಂತೆ ಕೇಳಿಕೊಂಡಿದ್ದ. ಆತನ ಮಾತು ಕೇಳಿ ಹೆದರಿದ ಸಲೀಂ ಅಬ್ದುಲ್ ರಹಿಮಾನನ್ನು ಅಲ್ಲಿಯೇ ಬಿಟ್ಟು ಬೈಕಿನಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದ. ತನ್ನ ಮನೆಗೆ ಬಂದು ವಿಷಯವನ್ನು ಹೇಳಿದ್ದು, ಮನೆಯವರ ಸೂಚನೆಯಂತೆ ಸಲೀಂ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದ.

ಬಂಟ್ವಾಳ ಪೊಲೀಸರು ಆರೋಪಿ ಅಬ್ದುಲ್ ರಹಿಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾನೆ. ನ.1ರಂದು ರಾತ್ರಿ 8.30 ಗಂಟೆಗೆ ಅಬ್ದುಲ್ ಸಮಾದ್ ಜೊತೆಗೆ ಇರಾ ಬಳಿಯ ಮೂಳೂರು ಪದವಿಗೆ ತೆರಳಿದ್ದು ಅಲ್ಲಿ ಜಗಳವುಂಟಾಗಿ ಕೊಲೆ ಮಾಡಿದ್ದಾಗಿ ಅಬ್ದುಲ್ ರಹಿಮಾನ್ ತಪ್ಪೊಪ್ಪಿಕೊಂಡಿದ್ದ. ಪೊಲೀಸರು ಮೂಳೂರುಪದವಿನಲ್ಲಿ ನ.8ರಂದು ಹುಡುಕಾಡಿದ್ದು, ಗುಡ್ಡದ ಮಧ್ಯೆ ಹೊಂಡಕ್ಕೆ ಎಸೆದಿದ್ದ ಶವವನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ನ.9ರ ಬುಧವಾರ ಬಂಟ್ವಾಳ ಮತ್ತು ವಿಟ್ಲ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು ಅರೆಬೆಂದ ಸ್ಥಿತಿಯಲ್ಲಿದ್ದ ಅಬ್ದುಲ್ ಸಮಾದ್ ಶವ ಪತ್ತೆ ಮಾಡಿದ್ದಾರೆ.


ಅಬ್ದುಲ್ ರಹಿಮಾನ್ ಸಲಿಂಗ ಕಾಮಕ್ಕಾಗಿ ಹದಿಹರೆಯದ ಯುವಕನನ್ನು ನಿರ್ಜನ ಗುಡ್ಡಕ್ಕೆ ಕರೆದೊಯ್ದು ಅಲ್ಲಿ ಸಹಕರಿಸದೇ ಇದ್ದ ಕಾರಣಕ್ಕೆ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರು ಆರೋಪಿಯನ್ನು ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್ ಸಮಾದ್ ನಾಪತ್ತೆ ಆಗಿದ್ದರೂ, ಕೊಲೆಯಾದ ಬಗ್ಗೆ ಯಾವುದೇ ಸುಳಿವು ಇರಲಿಲ್ಲ. ಆರೋಪಿ ಅಬ್ದುಲ್ ರಹಿಮಾನ್ ಸ್ವತಃ ತಾನೇ ಬಾಯ್ಬಿಡದ ಹೊರತು ಸುಲಭದಲ್ಲಿ ಪ್ರಕರಣ ಹೊರಬರುತ್ತಲೇ ಇರಲಿಲ್ಲ. ಆದರೆ ಕೃತ್ಯದ ಬಗ್ಗೆ ಸಂಬಂಧಿಕ ಯುವಕನಿಗೆ ಹೇಳಿ ತಾನೇ ಸಿಕ್ಕಾಕ್ಕೊಂಡಿದ್ದಾನೆ.
Mangalore 19 year old Youth found murdered in Bantwal case, forceful gay sex reason for murder says police. The attested has been identified as Abdul Rahiman (54). Abdul Samad, a young resident of Bolantoor village, who was reported missing was said to have been used for illegal activities by another youth of the same grama before murdering him and throwing the body down a hill.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm