ಬ್ರೇಕಿಂಗ್ ನ್ಯೂಸ್
11-11-22 10:24 pm HK News Desk ಕ್ರೈಂ
ಮೂಡುಬಿದ್ರೆ, ನ.11 : ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಮೂಡುಬಿದ್ರೆ ಪೊಲೀಸರು 65 ವರ್ಷದ ವೃದ್ಧನನ್ನು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿದ್ದು ಅದನ್ನು ಆಧರಿಸಿ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಕಾರ್ಕಳ ಮೂಲದ ಬಡ ಕುಟುಂಬದ ಪಿಯುಸಿ ವಿದ್ಯಾರ್ಥಿನಿ ಮೂಡುಬಿದ್ರೆಯಲ್ಲಿ ತನ್ನ ಅತ್ತೆಯ ಮನೆಯಲ್ಲಿದ್ದು ಮೂಡುಬಿದ್ರೆಯ ಕಾಲೇಜು ಹೋಗುತ್ತಿದ್ದಳು. ನ.8ರಂದು ವಿದ್ಯಾರ್ಥಿನಿ ಮನೆ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದಲ್ಲಿ ಆಕೆ ಓದುತ್ತಿದ್ದ ಕಾಲೇಜಿನ ನಿವೃತ್ತ ಕ್ಲರ್ಕ್ ಶ್ರೀಧರ್ ಪುರಾಣಿಕ್(65) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿಗೆ ಕಿವಿ ನೋವೆಂದು ಹೇಳಿದ್ದಕ್ಕೆ ಮನೆಗೆ ಕರೆದುಕೊಂಡು ಹೋಗುವಂತೆ ಕಾಲೇಜಿನ ಕಡೆಯಿಂದ ಆಕೆಯ ಅತ್ತೆಗೆ ಮಾಹಿತಿ ನೀಡಿದ್ದರು. ಹುಡುಗಿಗೆ ಸಂಬಂಧದಲ್ಲಿ ಅತ್ತೆಯಾಗಿದ್ದ ಮಹಿಳೆ ತನ್ನ ಪರಿಚಿತ ಶ್ರೀಧರ್ ಪುರಾಣಿಕ್ ಬಳಿ ಕಾಲೇಜಿನಿಂದ ಆಕೆಯನ್ನು ಕರೆತರುವಂತೆ ತಿಳಿಸಿದ್ದರು. ಕಾರಿನಲ್ಲಿ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಶ್ರೀಧರ್, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರಿಂದ ಬೇಸತ್ತ ವಿದ್ಯಾರ್ಥಿನಿ ಶ್ರೀಧರ್ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಮನೆ ಪಕ್ಕದ ಹಾಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಬಾಲಕಿ 17 ವರ್ಷದ ಅಪ್ರಾಪ್ತೆ ಆಗಿರುವುದರಿಂದ ಆರೋಪಿ ವಿರುದ್ಧ ಪೋಕ್ಸೋ ಮತ್ತು ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಹುಡುಗಿ ಹೆತ್ತವರು ಬಡವರಾಗಿದ್ದು ಏಳು ವರ್ಷಗಳ ಹಿಂದೆ ತಂದೆ ತೀರಿಕೊಂಡಿದ್ದರು. ಪರಿಶಿಷ್ಟ ಜಾತಿಯವರಾಗಿದ್ದು ಬಾಲಕಿಯನ್ನು ಕಾಲೇಜಿಗೆ ಸೇರಿಸಲು ಆಕೆಯ ಅತ್ತೆ ಸಹಾಯ ಮಾಡಿದ್ದರು. ಕಾಲೇಜು ಸೇರಿಸುವ ಸಂದರ್ಭದಲ್ಲಿ ಸ್ವಲ್ಪಾಂಶ ಶುಲ್ಕವನ್ನು ಶ್ರೀಧರ್ ಪುರಾಣಿಕ್ ಪಾವತಿಸಿದ್ದ ಎನ್ನಲಾಗುತ್ತಿದ್ದು, ಅದೇ ನೆಪದಲ್ಲಿ ಆಕೆಯನ್ನು ದುರುಪಯೋಗ ಪಡಿಸಲು ನೋಡಿದ್ದಾನೆ. ಇದರಿಂದ ಬೇಸತ್ತ ಹರೆಯದ ಹುಡುಗಿ ದಿಢೀರ್ ಆಗಿ ಸಾವಿಗೆ ಶರಣಾಗಿದ್ದಾಳೆ.
Moodbidri PU student commits suicide, Sexual harrasment of 65 year old man reason for death says Death note. The deceased girl was a minor whose age was 17. A posco case has been registered against the accused.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm