ಬ್ರೇಕಿಂಗ್ ನ್ಯೂಸ್
13-11-22 09:58 pm Mangalore Correspondent ಕ್ರೈಂ
ಬೆಳ್ತಂಗಡಿ, ನ.13: ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯನ್ನು ಕಟ್ಟಿಹಾಕಿ, ಮನೆಯಲ್ಲಿದ್ದ ಚಿನ್ನಾಭರಣ ದರೋಡೆಗೈದ ಘಟನೆ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿ ಬಳಿಯ ಅರಸಿಕಟ್ಟೆ ಎಂಬಲ್ಲಿ ಪ್ರಭಾವತಿ ನಾಯ್ಕ(67) ಎಂಬ ಮಹಿಳೆಯ ಮನೆಗೆ ನುಗ್ಗಿ ದರೋಡೆ ನಡೆಸಲಾಗಿದೆ. ನ.12ರಂದು ರಾತ್ರಿ ಏಳು ಗಂಟೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಸುತ್ತುವರಿದು, ಬಂಗಾರವನ್ನು ತಂದು ಕೊಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಬೊಬ್ಬೆ ಹೊಡೆದ ಮಹಿಳೆಯ ಕೈಕಾಲನ್ನು ಹಗ್ಗದಿಂದ ಕಟ್ಟಿ ಹಾಕಿದ್ದು, ಬಾಯಿಗೆ ಬಟ್ಟೆ ತುರುಕಿದ್ದಾರೆ. ಬಳಿಕ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಯನ್ನು ಕಿತ್ತು ತೆಗೆದಿದ್ದಾರೆ.
ಆನಂತರ ಮನೆಯ ಒಳಗೆ ಇರಿಸಿದ್ದ ಕಪಾಟು, ಬೆಡ್ಡನ್ನು ಜಾಲಾಡಿದ್ದು, ಅಲ್ಲಿದ್ದ ಚಿನ್ನವನ್ನೂ ಹೊತ್ತೊಯ್ದಿದ್ದಾರೆ. ಬೆಡ್ ಅಡಿಯಲ್ಲಿ ಇರಿಸಿದ್ದ ಮೂರು ಚಿನ್ನದ ಬಳೆಗಳು, ಮೂರು ಚಿನ್ನದ ಉಂಗುರಗಳು, ಮೂರು ಎಲೆಯ ಚಿನ್ನದ ಚೈನ್ ಒಂದನ್ನು ದೋಚಿದ್ದಾರೆ. ಇದಲ್ಲದೆ, ಅಡುಗೆ ಕೋಣೆಯಲ್ಲಿ ಇಟ್ಟಿದ್ದ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಅಂದಾಜು 4.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದು ಪರಾರಿಯಾಗಿದ್ದಾರೆ. ಮಹಿಳೆ ಆನಂತರ ನಿಧಾನಕ್ಕೆ ಕೊಸರಾಡಿಕೊಂಡು ಮನೆಯ ಒಳಗೆ ತೆರಳಿದ್ದು, ಕಳ್ಳರು ನುಗ್ಗಿ ದರೋಡೆ ನಡೆಸಿದ್ದನ್ನು ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತುಳುವಿನಲ್ಲಿ ಮಾತನಾಡುತ್ತಿದ್ದು, ಕೊನೆಗೆ ಹೋಗುವಾಗ ಎಂಕುಲು ಬತ್ತಿನ ಕೆಲಸ ಆಂಡ್(ನಾವು ಬಂದ ಕೆಲಸ ಆಯ್ತು) ಅಂತ ಹೇಳಿ ಹೋಗಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Mangalore Robbers tie women flee from home with gold worth 4.60 lakhs in Belthangady.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm