ಬ್ರೇಕಿಂಗ್ ನ್ಯೂಸ್
13-11-22 09:58 pm Mangalore Correspondent ಕ್ರೈಂ
ಬೆಳ್ತಂಗಡಿ, ನ.13: ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯನ್ನು ಕಟ್ಟಿಹಾಕಿ, ಮನೆಯಲ್ಲಿದ್ದ ಚಿನ್ನಾಭರಣ ದರೋಡೆಗೈದ ಘಟನೆ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿ ಬಳಿಯ ಅರಸಿಕಟ್ಟೆ ಎಂಬಲ್ಲಿ ಪ್ರಭಾವತಿ ನಾಯ್ಕ(67) ಎಂಬ ಮಹಿಳೆಯ ಮನೆಗೆ ನುಗ್ಗಿ ದರೋಡೆ ನಡೆಸಲಾಗಿದೆ. ನ.12ರಂದು ರಾತ್ರಿ ಏಳು ಗಂಟೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಸುತ್ತುವರಿದು, ಬಂಗಾರವನ್ನು ತಂದು ಕೊಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಬೊಬ್ಬೆ ಹೊಡೆದ ಮಹಿಳೆಯ ಕೈಕಾಲನ್ನು ಹಗ್ಗದಿಂದ ಕಟ್ಟಿ ಹಾಕಿದ್ದು, ಬಾಯಿಗೆ ಬಟ್ಟೆ ತುರುಕಿದ್ದಾರೆ. ಬಳಿಕ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಯನ್ನು ಕಿತ್ತು ತೆಗೆದಿದ್ದಾರೆ.
ಆನಂತರ ಮನೆಯ ಒಳಗೆ ಇರಿಸಿದ್ದ ಕಪಾಟು, ಬೆಡ್ಡನ್ನು ಜಾಲಾಡಿದ್ದು, ಅಲ್ಲಿದ್ದ ಚಿನ್ನವನ್ನೂ ಹೊತ್ತೊಯ್ದಿದ್ದಾರೆ. ಬೆಡ್ ಅಡಿಯಲ್ಲಿ ಇರಿಸಿದ್ದ ಮೂರು ಚಿನ್ನದ ಬಳೆಗಳು, ಮೂರು ಚಿನ್ನದ ಉಂಗುರಗಳು, ಮೂರು ಎಲೆಯ ಚಿನ್ನದ ಚೈನ್ ಒಂದನ್ನು ದೋಚಿದ್ದಾರೆ. ಇದಲ್ಲದೆ, ಅಡುಗೆ ಕೋಣೆಯಲ್ಲಿ ಇಟ್ಟಿದ್ದ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಅಂದಾಜು 4.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದು ಪರಾರಿಯಾಗಿದ್ದಾರೆ. ಮಹಿಳೆ ಆನಂತರ ನಿಧಾನಕ್ಕೆ ಕೊಸರಾಡಿಕೊಂಡು ಮನೆಯ ಒಳಗೆ ತೆರಳಿದ್ದು, ಕಳ್ಳರು ನುಗ್ಗಿ ದರೋಡೆ ನಡೆಸಿದ್ದನ್ನು ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತುಳುವಿನಲ್ಲಿ ಮಾತನಾಡುತ್ತಿದ್ದು, ಕೊನೆಗೆ ಹೋಗುವಾಗ ಎಂಕುಲು ಬತ್ತಿನ ಕೆಲಸ ಆಂಡ್(ನಾವು ಬಂದ ಕೆಲಸ ಆಯ್ತು) ಅಂತ ಹೇಳಿ ಹೋಗಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Mangalore Robbers tie women flee from home with gold worth 4.60 lakhs in Belthangady.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm