ಬ್ರೇಕಿಂಗ್ ನ್ಯೂಸ್
13-11-22 09:58 pm Mangalore Correspondent ಕ್ರೈಂ
ಬೆಳ್ತಂಗಡಿ, ನ.13: ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯನ್ನು ಕಟ್ಟಿಹಾಕಿ, ಮನೆಯಲ್ಲಿದ್ದ ಚಿನ್ನಾಭರಣ ದರೋಡೆಗೈದ ಘಟನೆ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿ ಬಳಿಯ ಅರಸಿಕಟ್ಟೆ ಎಂಬಲ್ಲಿ ಪ್ರಭಾವತಿ ನಾಯ್ಕ(67) ಎಂಬ ಮಹಿಳೆಯ ಮನೆಗೆ ನುಗ್ಗಿ ದರೋಡೆ ನಡೆಸಲಾಗಿದೆ. ನ.12ರಂದು ರಾತ್ರಿ ಏಳು ಗಂಟೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಸುತ್ತುವರಿದು, ಬಂಗಾರವನ್ನು ತಂದು ಕೊಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಬೊಬ್ಬೆ ಹೊಡೆದ ಮಹಿಳೆಯ ಕೈಕಾಲನ್ನು ಹಗ್ಗದಿಂದ ಕಟ್ಟಿ ಹಾಕಿದ್ದು, ಬಾಯಿಗೆ ಬಟ್ಟೆ ತುರುಕಿದ್ದಾರೆ. ಬಳಿಕ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಯನ್ನು ಕಿತ್ತು ತೆಗೆದಿದ್ದಾರೆ.
ಆನಂತರ ಮನೆಯ ಒಳಗೆ ಇರಿಸಿದ್ದ ಕಪಾಟು, ಬೆಡ್ಡನ್ನು ಜಾಲಾಡಿದ್ದು, ಅಲ್ಲಿದ್ದ ಚಿನ್ನವನ್ನೂ ಹೊತ್ತೊಯ್ದಿದ್ದಾರೆ. ಬೆಡ್ ಅಡಿಯಲ್ಲಿ ಇರಿಸಿದ್ದ ಮೂರು ಚಿನ್ನದ ಬಳೆಗಳು, ಮೂರು ಚಿನ್ನದ ಉಂಗುರಗಳು, ಮೂರು ಎಲೆಯ ಚಿನ್ನದ ಚೈನ್ ಒಂದನ್ನು ದೋಚಿದ್ದಾರೆ. ಇದಲ್ಲದೆ, ಅಡುಗೆ ಕೋಣೆಯಲ್ಲಿ ಇಟ್ಟಿದ್ದ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಅಂದಾಜು 4.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದು ಪರಾರಿಯಾಗಿದ್ದಾರೆ. ಮಹಿಳೆ ಆನಂತರ ನಿಧಾನಕ್ಕೆ ಕೊಸರಾಡಿಕೊಂಡು ಮನೆಯ ಒಳಗೆ ತೆರಳಿದ್ದು, ಕಳ್ಳರು ನುಗ್ಗಿ ದರೋಡೆ ನಡೆಸಿದ್ದನ್ನು ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತುಳುವಿನಲ್ಲಿ ಮಾತನಾಡುತ್ತಿದ್ದು, ಕೊನೆಗೆ ಹೋಗುವಾಗ ಎಂಕುಲು ಬತ್ತಿನ ಕೆಲಸ ಆಂಡ್(ನಾವು ಬಂದ ಕೆಲಸ ಆಯ್ತು) ಅಂತ ಹೇಳಿ ಹೋಗಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Mangalore Robbers tie women flee from home with gold worth 4.60 lakhs in Belthangady.
18-03-26 01:05 pm
HK News Staffer
ಅಶ್ಲೀಲ ಪೆನ್ಡ್ರೈವ್ ವಿಡಿಯೋ ಪ್ರಕರಣ ; 13,712 ಪುಟ...
18-03-26 12:17 pm
ಬೆಳಗಾವಿಯಲ್ಲಿ ಅಮಾನವೀಯ ಘಟನೆ ; 15 ದಿನದ ಹೆಣ್ಣು ಮಗ...
18-03-26 11:38 am
ಬ್ಯಾಂಕ್ ಲಾಕರ್ನಿಂದಲೇ 24 ಲಕ್ಷ ಚಿನ್ನಾಭರಣ ನಾಪತ್...
18-03-26 09:44 am
ಹೈದರಾಬಾದ್ ನಲ್ಲಿ ಫಾರ್ಮ್ಹೌಸ್ ಡ್ರಗ್ಸ್ ಪಾರ್ಟಿ ಮ...
17-03-26 08:45 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
18-03-26 09:41 am
HK News Staffer
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am