ಬ್ರೇಕಿಂಗ್ ನ್ಯೂಸ್
13-11-22 09:58 pm Mangalore Correspondent ಕ್ರೈಂ
ಬೆಳ್ತಂಗಡಿ, ನ.13: ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯನ್ನು ಕಟ್ಟಿಹಾಕಿ, ಮನೆಯಲ್ಲಿದ್ದ ಚಿನ್ನಾಭರಣ ದರೋಡೆಗೈದ ಘಟನೆ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿ ಬಳಿಯ ಅರಸಿಕಟ್ಟೆ ಎಂಬಲ್ಲಿ ಪ್ರಭಾವತಿ ನಾಯ್ಕ(67) ಎಂಬ ಮಹಿಳೆಯ ಮನೆಗೆ ನುಗ್ಗಿ ದರೋಡೆ ನಡೆಸಲಾಗಿದೆ. ನ.12ರಂದು ರಾತ್ರಿ ಏಳು ಗಂಟೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಸುತ್ತುವರಿದು, ಬಂಗಾರವನ್ನು ತಂದು ಕೊಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಬೊಬ್ಬೆ ಹೊಡೆದ ಮಹಿಳೆಯ ಕೈಕಾಲನ್ನು ಹಗ್ಗದಿಂದ ಕಟ್ಟಿ ಹಾಕಿದ್ದು, ಬಾಯಿಗೆ ಬಟ್ಟೆ ತುರುಕಿದ್ದಾರೆ. ಬಳಿಕ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಯನ್ನು ಕಿತ್ತು ತೆಗೆದಿದ್ದಾರೆ.
ಆನಂತರ ಮನೆಯ ಒಳಗೆ ಇರಿಸಿದ್ದ ಕಪಾಟು, ಬೆಡ್ಡನ್ನು ಜಾಲಾಡಿದ್ದು, ಅಲ್ಲಿದ್ದ ಚಿನ್ನವನ್ನೂ ಹೊತ್ತೊಯ್ದಿದ್ದಾರೆ. ಬೆಡ್ ಅಡಿಯಲ್ಲಿ ಇರಿಸಿದ್ದ ಮೂರು ಚಿನ್ನದ ಬಳೆಗಳು, ಮೂರು ಚಿನ್ನದ ಉಂಗುರಗಳು, ಮೂರು ಎಲೆಯ ಚಿನ್ನದ ಚೈನ್ ಒಂದನ್ನು ದೋಚಿದ್ದಾರೆ. ಇದಲ್ಲದೆ, ಅಡುಗೆ ಕೋಣೆಯಲ್ಲಿ ಇಟ್ಟಿದ್ದ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಅಂದಾಜು 4.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದು ಪರಾರಿಯಾಗಿದ್ದಾರೆ. ಮಹಿಳೆ ಆನಂತರ ನಿಧಾನಕ್ಕೆ ಕೊಸರಾಡಿಕೊಂಡು ಮನೆಯ ಒಳಗೆ ತೆರಳಿದ್ದು, ಕಳ್ಳರು ನುಗ್ಗಿ ದರೋಡೆ ನಡೆಸಿದ್ದನ್ನು ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತುಳುವಿನಲ್ಲಿ ಮಾತನಾಡುತ್ತಿದ್ದು, ಕೊನೆಗೆ ಹೋಗುವಾಗ ಎಂಕುಲು ಬತ್ತಿನ ಕೆಲಸ ಆಂಡ್(ನಾವು ಬಂದ ಕೆಲಸ ಆಯ್ತು) ಅಂತ ಹೇಳಿ ಹೋಗಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Mangalore Robbers tie women flee from home with gold worth 4.60 lakhs in Belthangady.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm