ಬ್ರೇಕಿಂಗ್ ನ್ಯೂಸ್
13-10-20 01:37 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮಹಜರು ಪೂರ್ತಿಗೊಳಿಸಿದ್ದು ಟೆಂಪೋದಲ್ಲಿ ಒಂದು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇತ್ತೆಂದು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೆ, ಹಾಸನದಿಂದ ಮಾಂಸವನ್ನು ತರಲಾಗುತ್ತಿತ್ತು ಎಂದು ಆರೋಪಿ ಬಾಯಿ ಬಿಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.
ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದರು. ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಯತ್ನಿಸಿದ್ದು ನುಗ್ಗಿ ಬಂದ ವಾಹನವನ್ನು ಕಾರ್ಯಕರ್ತರು ಹಂಪನಕಟ್ಟೆಯಲ್ಲಿ ತಡೆದಿದ್ದರು. ಘಟನೆಯಲ್ಲಿ ಇಬ್ಬರು ಪರಾರಿಯಾಗಿದ್ದರು. ಒಬ್ಬ ಸಿಕ್ಕಿಬಿದ್ದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಪರಿಶೀಲನೆ ವೇಳೆ ಟೆಂಪೋ ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿತ್ತು. ಇದೀಗ ಮಹಜರು ವೇಳೆ ಒಂದು ಸಾವಿರ ಕೆಜಿಗೂ ಹೆಚ್ಚು ಮಾಂಸ ಇರುವುದು ಬೆಳಕಿಗೆ ಬಂದಿದೆ.
ಅಕ್ರಮ ಗೋಸಾಗಾಟ ವಿಚಾರದಲ್ಲಿ ಪೊಲೀಸರು ನಿಗಾ ಇಟ್ಟಿರುವ ಹಿನ್ನೆಲೆಯಲ್ಲಿ ಖದೀಮರು ಹಾಲಿನ ಟೆಂಪೋವನ್ನು ಸಾಗಾಟಕ್ಕೆ ಬಳಸಿದ್ದರು. ಹಾಸನದಿಂದ ಆರೋಕ್ಯಾ ಹಾಲನ್ನು ಮಂಗಳೂರಿಗೆ ತರುವ ನೆಪದಲ್ಲಿ ಪೊಲೀಸರನ್ನು ಯಾಮಾರಿಸಲು ತಂತ್ರ ಹೂಡಿದ್ದರು. ಆದರೆ, ಈ ಬಗ್ಗೆ ಸುಳಿವು ಪಡೆದ ಬಜರಂಗದಳ ಕಾರ್ಯಕರ್ತರು ಖದೀಮರ ಜಾಲವನ್ನು ಭೇದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಆಗುತ್ತಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Mangalore police have found one thousand kilos of beef meat packed inside the milk van were Bajarang Dal activists have chased the van and caught it hold at Venlock Hospital, Mangalore here on 13 Oct, Tuesday, 2020
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm