ಬ್ರೇಕಿಂಗ್ ನ್ಯೂಸ್
13-10-20 01:37 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮಹಜರು ಪೂರ್ತಿಗೊಳಿಸಿದ್ದು ಟೆಂಪೋದಲ್ಲಿ ಒಂದು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇತ್ತೆಂದು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೆ, ಹಾಸನದಿಂದ ಮಾಂಸವನ್ನು ತರಲಾಗುತ್ತಿತ್ತು ಎಂದು ಆರೋಪಿ ಬಾಯಿ ಬಿಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.
ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದರು. ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಯತ್ನಿಸಿದ್ದು ನುಗ್ಗಿ ಬಂದ ವಾಹನವನ್ನು ಕಾರ್ಯಕರ್ತರು ಹಂಪನಕಟ್ಟೆಯಲ್ಲಿ ತಡೆದಿದ್ದರು. ಘಟನೆಯಲ್ಲಿ ಇಬ್ಬರು ಪರಾರಿಯಾಗಿದ್ದರು. ಒಬ್ಬ ಸಿಕ್ಕಿಬಿದ್ದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಪರಿಶೀಲನೆ ವೇಳೆ ಟೆಂಪೋ ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿತ್ತು. ಇದೀಗ ಮಹಜರು ವೇಳೆ ಒಂದು ಸಾವಿರ ಕೆಜಿಗೂ ಹೆಚ್ಚು ಮಾಂಸ ಇರುವುದು ಬೆಳಕಿಗೆ ಬಂದಿದೆ.
ಅಕ್ರಮ ಗೋಸಾಗಾಟ ವಿಚಾರದಲ್ಲಿ ಪೊಲೀಸರು ನಿಗಾ ಇಟ್ಟಿರುವ ಹಿನ್ನೆಲೆಯಲ್ಲಿ ಖದೀಮರು ಹಾಲಿನ ಟೆಂಪೋವನ್ನು ಸಾಗಾಟಕ್ಕೆ ಬಳಸಿದ್ದರು. ಹಾಸನದಿಂದ ಆರೋಕ್ಯಾ ಹಾಲನ್ನು ಮಂಗಳೂರಿಗೆ ತರುವ ನೆಪದಲ್ಲಿ ಪೊಲೀಸರನ್ನು ಯಾಮಾರಿಸಲು ತಂತ್ರ ಹೂಡಿದ್ದರು. ಆದರೆ, ಈ ಬಗ್ಗೆ ಸುಳಿವು ಪಡೆದ ಬಜರಂಗದಳ ಕಾರ್ಯಕರ್ತರು ಖದೀಮರ ಜಾಲವನ್ನು ಭೇದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಆಗುತ್ತಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Mangalore police have found one thousand kilos of beef meat packed inside the milk van were Bajarang Dal activists have chased the van and caught it hold at Venlock Hospital, Mangalore here on 13 Oct, Tuesday, 2020
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm