ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm