ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm