ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm