ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm