ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am