ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm