ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm