ಭಿಕ್ಷೆ ಬೇಡುವ ನೆಪದಲ್ಲಿ ಬಂದು ಆಂಧ್ರದ ಟಿಡಿಪಿ ಪಕ್ಷದ ನಾಯಕನ ಮೇಲೆ ಕುಡುಗೋಲಿನಿಂದ ಹಲ್ಲೆ ; ವೈರಲ್ ವಿಡಿಯೋ 

17-11-22 02:02 pm       HK News Desk   ಕ್ರೈಂ

ಭಿಕ್ಷೆ ಬೇಡುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಆಂಧ್ರಪ್ರದೇಶದ ತುಲಿಯಲ್ಲಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೊಲ್ನಾಟಿ ಶೇಷಗಿರಿ ರಾವ್ ಅವರ ಮನೆಯಗೆ ಬಂದು, ರಾವ್ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿರುವ ಘಟನೆ ನಡೆದಿದೆ.

ಹೈದರಾಬಾದ್, ನ.17: ಭಿಕ್ಷೆ ಬೇಡುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಆಂಧ್ರಪ್ರದೇಶದ ತುಲಿಯಲ್ಲಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೊಲ್ನಾಟಿ ಶೇಷಗಿರಿ ರಾವ್ ಅವರ ಮನೆಯಗೆ ಬಂದು, ರಾವ್ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿರುವ ಘಟನೆ ನಡೆದಿದೆ.

ಘಟನೆಯ ದೃಶ್ಯಾವಳಿ ರಾವ್‌ ಮನೆ ಅಳವಡಿಸಲಾಗಿದ್ದ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ದಾಳಿಕೋರ ದಾರ್ಶನಿಕರ ವೇಷ ಧರಿಸಿರುವುದನ್ನು ನೋಡಬಹುದು. ಆತನಿಗೆ ರಾವ್‌ ತನ್ನ ಮನೆಯ ಪ್ರವೇಶದ್ವಾರದಲ್ಲಿ ಕೆಲವು ಧಾನ್ಯಗಳನ್ನು ನೀಡುತ್ತಿರುವಾಗ ರಾವ್ ಮೇಲೆ ಕಿಡಿಗೇಡಿ ಕುಡುಗೋಲಿನಿಂದ ಹಲ್ಲೆ ನಡೆಸಿ, ಅಲ್ಲಿಂದ ಎಸ್ಕೇಪ್‌ ಆಗುವುದನ್ನು ನೋಡಬಹುದು.

ಘಟನೆಯಲ್ಲಿ ರಾವ್‌ ಅವರ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ಮೋಟಾರು ಬೈಕ್‌ನಲ್ಲಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

In a horrifying incident, an unidentified miscreant attacked Telugu Desam Party leader and former MPP Seshagiri Rao with a sharp-edged weapon. According to the sources, the accused entered the TDP leader's house in the guise of Bhavani Mala and interacted with him by hiding the knife under the towel.