ಬ್ರೇಕಿಂಗ್ ನ್ಯೂಸ್
18-11-22 07:46 pm Mangalore Correspondent ಕ್ರೈಂ
ಮಂಗಳೂರು, ನ.18: ಹೂವಿನ ಅಂಗಡಿಯಲ್ಲಿ ಇಟ್ಟಿದ್ದ 9 ಲಕ್ಷ ರೂ. ನಗದು ಮತ್ತು ಸಿಸಿ ಕೆಮರಾದ ಡಿವಿಆರ್ ಕಳವುಗೈದ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪ್ಪಾಡ್ ಚೇಂಬರ್ ಕಟ್ಟಡದಲ್ಲಿ ನಡೆದಿದೆ.
ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಹೂವಿನ ಅಂಗಡಿಯಲ್ಲಿ ಘಟನೆ ನಡೆದಿದ್ದು, ಕಳೆದ 12 ವರ್ಷಗಳಿಂದ ಹೋಲ್ಸೇಲ್ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಗುರುವಾರ ಬೆಳಗ್ಗೆ ಅವರ ಮಗ ರಿಯಾಜ್ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್ನ ಸೆಂಟರ್ ಲಾಕ್ ಮುರಿದಿತ್ತು. ಅಂಗಡಿಯ ಶಟರ್ ಮೇಲಕ್ಕೆತ್ತಿ ನೋಡಿದಾಗ ಟೇಬಲ್ನ ಡ್ರಾವರ್ ಲಾಕ್ ಮುರಿದು ಅದರಲ್ಲಿದ್ದ 9 ಲಕ್ಷ ರೂ. ನಗದು ಹಾಗೂ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕೆಮರಾ ಡಿವಿಆರ್ ಬಾಕ್ಸ್ ಅನ್ನೂ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.
ಉಮರಬ್ಬ ಅವರು ಪ್ರತಿನಿತ್ಯ ವ್ಯಾಪಾರದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಹೂವು ಪೂರೈಸುವ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಡ್ರಾವರ್ನಲ್ಲಿ ಇಟ್ಟು ಲಾಕ್ ಮಾಡಿ ಸಂಜೆ 6 ಗಂಟೆಗೆ ಬಾಗಿಲು ಮುಚ್ಚಿ ತೆರೆಳಿದ್ದರು.
ಚಿತ್ರದುರ್ಗ, ತುಮಕೂರು ಕಡೆಗಳಿಂದ ಹೂವಿನ ರೈತರು ಬರಲಿದ್ದರು. ಸುಮಾರು ಒಂದು ತಿಂಗಳಿನಿಂದ ಅವರಿಗಾಗಿ ನಗದನ್ನು ಇಟ್ಟುಕೊಂಡು ಕಾಯುತ್ತಿದ್ದೆ ಎಂದು ಉಮರಬ್ಬ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Whole sale flower shop robbed, 9 lakhs cash stolen.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm