ಬ್ರೇಕಿಂಗ್ ನ್ಯೂಸ್
18-11-22 07:46 pm Mangalore Correspondent ಕ್ರೈಂ
ಮಂಗಳೂರು, ನ.18: ಹೂವಿನ ಅಂಗಡಿಯಲ್ಲಿ ಇಟ್ಟಿದ್ದ 9 ಲಕ್ಷ ರೂ. ನಗದು ಮತ್ತು ಸಿಸಿ ಕೆಮರಾದ ಡಿವಿಆರ್ ಕಳವುಗೈದ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪ್ಪಾಡ್ ಚೇಂಬರ್ ಕಟ್ಟಡದಲ್ಲಿ ನಡೆದಿದೆ.
ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಹೂವಿನ ಅಂಗಡಿಯಲ್ಲಿ ಘಟನೆ ನಡೆದಿದ್ದು, ಕಳೆದ 12 ವರ್ಷಗಳಿಂದ ಹೋಲ್ಸೇಲ್ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಗುರುವಾರ ಬೆಳಗ್ಗೆ ಅವರ ಮಗ ರಿಯಾಜ್ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್ನ ಸೆಂಟರ್ ಲಾಕ್ ಮುರಿದಿತ್ತು. ಅಂಗಡಿಯ ಶಟರ್ ಮೇಲಕ್ಕೆತ್ತಿ ನೋಡಿದಾಗ ಟೇಬಲ್ನ ಡ್ರಾವರ್ ಲಾಕ್ ಮುರಿದು ಅದರಲ್ಲಿದ್ದ 9 ಲಕ್ಷ ರೂ. ನಗದು ಹಾಗೂ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕೆಮರಾ ಡಿವಿಆರ್ ಬಾಕ್ಸ್ ಅನ್ನೂ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.
ಉಮರಬ್ಬ ಅವರು ಪ್ರತಿನಿತ್ಯ ವ್ಯಾಪಾರದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಹೂವು ಪೂರೈಸುವ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಡ್ರಾವರ್ನಲ್ಲಿ ಇಟ್ಟು ಲಾಕ್ ಮಾಡಿ ಸಂಜೆ 6 ಗಂಟೆಗೆ ಬಾಗಿಲು ಮುಚ್ಚಿ ತೆರೆಳಿದ್ದರು.
ಚಿತ್ರದುರ್ಗ, ತುಮಕೂರು ಕಡೆಗಳಿಂದ ಹೂವಿನ ರೈತರು ಬರಲಿದ್ದರು. ಸುಮಾರು ಒಂದು ತಿಂಗಳಿನಿಂದ ಅವರಿಗಾಗಿ ನಗದನ್ನು ಇಟ್ಟುಕೊಂಡು ಕಾಯುತ್ತಿದ್ದೆ ಎಂದು ಉಮರಬ್ಬ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Whole sale flower shop robbed, 9 lakhs cash stolen.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm