ಬ್ರೇಕಿಂಗ್ ನ್ಯೂಸ್
13-10-20 05:39 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 13: ರಾಜಧಾನಿ ದೆಹಲಿ ಪೊಲೀಸರು ಫೇಕ್ ಕ್ಯಾಬ್ ರಾಕೆಟ್ ಒಂದನ್ನು ಭೇದಿಸಿದ್ದಾರೆ. ಉಬರ್, ಓಲಾ ರೀತಿಯ ಟ್ರಾವೆಲ್ಸ್ ಕ್ಯಾಬ್ ಏಪ್ ಮಾಡುವುದಾಗಿ ಹೇಳಿ ಒಂದು ಸಾವಿರಕ್ಕೂ ಹೆಚ್ಚು ಮಂದಿಯಿಂದ ಹಣ ಪಡೆದು 250 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ಇದಾಗಿದ್ದು, ಪ್ರಕರಣದ ರೂವಾರಿ ಮಹಿಳೆಯನ್ನು ದೆಹಲಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.
ಕೇರಳ ಮೂಲದ ಡೈಸಿ ಮೆನನ್ ಬಂಧಿತ ಮಹಿಳೆಯಾಗಿದ್ದು, ‘’ಹೆಲ್ಲೋ ಟ್ಯಾಕ್ಸಿ’’ ಹೆಸರಲ್ಲಿ ಏಪ್ ಅಭಿವೃದ್ಧಿ ಪಡಿಸುವುದಾಗಿ ಜನರನ್ನು ನಂಬಿಸಿ ವಂಚಿಸಿದ್ದಾಳೆ. ಎಸ್ಎಂಪಿ ಇಂಡೆಕ್ಸ್ ಎನ್ನುವ ಕಂಪನಿ ಸ್ಥಾಪಿಸಿ, ಅದರ ಮೂಲಕ ಡಬಲ್ ರಿಟರ್ನ್ ಆಮಿಷವೊಡ್ಡಿ ಹಣ ಹೂಡಿಕೆ ಮಾಡಿಸುತ್ತಿದ್ದರು. ಹೆಲ್ಲೋ ಟ್ಯಾಕ್ಸಿಗೆ ಹಣ ಹೂಡಿದರೆ ವನ್ ಟು ಡಬಲ್ ಹಣವನ್ನು ಹಿಂತಿರುಗಿಸುತ್ತೇವೆ ಎಂದು ಹೂಡಿಕೆದಾರರನ್ನು ನಂಬಿಸುತ್ತಿದ್ದರು.
ಆರಂಭದಲ್ಲಿ ಒಂದಷ್ಟು ಹಣವನ್ನು ಹಿಂತಿರುಗಿಸುತ್ತಿದ್ದುದು ಹೂಡಿಕೆದಾರರಲ್ಲಿ ನಂಬಿಕೆ ಬೆಳೆದಿತ್ತು. ಆದರೆ ಕಂಪನಿಯವರು ಕೋಟಿಗಟ್ಟಲೆ ಹಣ ಸಂಗ್ರಹ ಆಗುತ್ತಿದ್ದಂತೆ ಕಚೇರಿಗೆ ಬಾಗಿಲು ಎಳೆದಿದ್ದಾರೆ. ಇದರಿಂದ ಭಯಗೊಂಡ ಹೂಡಿಕೆದಾರರು ಪೊಲೀಸರಿಗೆ ದೂರು ಕೊಟ್ಟಿದ್ದರು.
ಈ ನಡುವೆ, ಪೊಲೀಸರು ಹಿಂದೆ ಬಿದ್ದಿದ್ದಾರೆ ಎನ್ನುವ ಮಾಹಿತಿ ತಿಳಿದ ಆರೋಪಿಗಳು ಕಂಪನಿಯ ಕಚೇರಿಯನ್ನು ಸ್ಥಳಾಂತರ ಮಾಡತೊಡಗಿದ್ದರು. ಆರಂಭದದಲ್ಲಿ ಗಾಜಿಯಾಬಾದ್ ನಲ್ಲಿ ಕಚೇರಿ ಇತ್ತು. ಆನಂತ್ರ ಪತ್ಪರ್ ಗಂಜ್, ಆಬಳಿಕ ರೋಹಿಣಿ ಎಂಬಲ್ಲಿಗೆ ಸ್ಥಳಾಂತರ ಮಾಡಿ ಹೂಡಿಕೆದಾರರ ವಿಶ್ವಾಸ ಉಳಿಸಿಕೊಳ್ಳುವ ಯತ್ನ ಮಾಡಿದ್ರು. ಇದೇ ವೇಳೆ, ಪೊಲೀಸರು ಕಂಪನಿಯ ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿದ್ದು, 3.2 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ.ಅಲ್ಲದೆ, ಕಂಪನಿ ಕಡೆಯಿಂದ ಖರೀದಿಸಿದ್ದ 3.5 ಕೋಟಿ ರೂಪಾಯಿ ಮೌಲ್ಯದ 60 ಹೊಸ ಹ್ಯೂಂಡೈ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಆಗಸ್ಟ್ ನಲ್ಲಿ ನಿರ್ದೇಶಕರಲ್ಲಿ ಒಬ್ಬನಾದ ರಾಜೇಶ್ ಮಹ್ತೋ ಎಂಬಾತನ ಬಂಧನವಾಗಿತ್ತು. ಆತ ನೀಡಿದ ಮಾಹಿತಿ ಪ್ರಕಾರ, ಪೊಲೀಸರು ಪ್ರಮುಖ ರೂವಾರಿ ಎನ್ನಲಾಗುವ ಡೈಸಿ ಮೆನನ್ ಎನ್ನುವ ಮಹಿಳೆಯನ್ನು ಬಂಧಿಸಿದ್ದಾರೆ. ಕಂಪನಿಯ ನಿರ್ದೇಶಕರು ಸೇರಿಕೊಂಡು ಸ್ಟಾರ್ ಹೊಟೇಲ್ ಗಳಲ್ಲಿ ಹೂಡಿಕೆದಾರರನ್ನು ಕರೆಸಿ, ಕಾರ್ಯಕ್ರಮ ಮಾಡುತ್ತಿದ್ದರು. ಸೆಮಿನಾರ್ ಆಯೋಜಿಸುವ ಮೂಲಕ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Delhi Police’s Economic Offences Wing (EOW) has arrested a woman who was a director of a company that allegedly duped around 1,000 people of Rs 250 crore by eliciting them to invest in their new cab aggregator project called "Hello Taxi".
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm