ಬ್ರೇಕಿಂಗ್ ನ್ಯೂಸ್
19-11-22 12:56 pm Mangalore Correspondent ಕ್ರೈಂ
ಉಳ್ಳಾಲ, ನ.19 : ದ್ವಿಚಕ್ರ ವಾಹನ ಸವಾರರನ್ನ ತಡೆದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಡಿನಿಂದ ಹಲ್ಲೆಗೈದ ದುಷ್ಕರ್ಮಿಗಳ ತಂಡ ಏಕಕಾಲದಲ್ಲಿ ಎರಡು ಸ್ಕೂಟರ್ ದರೋಡೆಗೈದ ಘಟನೆ ರಾ.ಹೆ. 66ರ ಅಂಬಿಕಾರೋಡ್ ಮತ್ತು ಉಚ್ಚಿಲ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ 11.10 ರ ಸಮಯದಲ್ಲಿ ತಲಪಾಡಿ, ನಾರ್ಲಗುತ್ತು ನಿವಾಸಿ ಹರ್ಷಿತ್ ಎಂಬವರು ಔಷಧಿ ಖರೀದಿಸಲು ತನ್ನ ಆ್ಯಕ್ಸಸ್ 125 ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಚ್ಚಿಲ ಬಸ್ ಸ್ಟಾಪ್ ಬಳಿಯಲ್ಲಿದ್ದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈ ಸನ್ನೆ ಮಾಡಿ ತಡೆದಿದ್ದಾರೆ. ಮೂವರು ಅಪರಿಚಿತರು ಹರ್ಷಿತ್ ಗೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ, ಓರ್ವನು ತನ್ನ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಎಡಭುಜಕ್ಕೆ ಹೊಡೆದು ಗಾಯಗೊಳಿಸಿ ಸ್ಕೂಟರನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಅದೇ ದಿನ ರಾತ್ರಿ 11.30 ರ ವೇಳೆ ಮಂಜೇಶ್ವರ ನಿವಾಸಿ ಪ್ರಫುಲ್ ರಾಜ್ ಎಂಬವರು ಕುತ್ತಾರು ,ಪಂಡಿತ್ ಹೌಸ್ನ ತನ್ನ ಅಜ್ಜಿ ಮನೆಗೆ ಟಿವಿಎಸ್ ಟಾರ್ಕ್ ಸ್ಕೂಟರಲ್ಲಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿ 3 ಜನ ಆಗಂತುಕರು ತಡೆದಿದ್ದಾರೆ. ಆಗಂತುಕರು ಪ್ರಪುಲ್ ರಾಜನ್ನ ಉದ್ದೇಶಿಸಿ ಅರೆ ಸಾಲೆ, ರುಕ್ ರುಕ್ ಎಂದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಒಬ್ಬಾತ ಕಬ್ಬಿಣದ ಸರಳಿನಿಂದ ಪ್ರಪುಲ್ ಅವರ ಎಡಭುಜಕ್ಕೆ ಹೊಡೆದು ಹಲ್ಲೆ ನಡೆಸಿ ಸ್ಕೂಟರನ್ನ ದರೋಡೆಗೈದಿದ್ದಾರೆ. ದರೋಡೆಯಿಂದ ಗಾಯಗೊಂಡ ಹರ್ಷಿತ್ ಮತ್ತು ಪ್ರಫುಲ್ ರಾಜ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
2 two Wheeler's stolen after attacking men with iron rod and abusing them at NH 66 in Uchila Mangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am