ಬ್ರೇಕಿಂಗ್ ನ್ಯೂಸ್
19-11-22 12:56 pm Mangalore Correspondent ಕ್ರೈಂ
ಉಳ್ಳಾಲ, ನ.19 : ದ್ವಿಚಕ್ರ ವಾಹನ ಸವಾರರನ್ನ ತಡೆದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಡಿನಿಂದ ಹಲ್ಲೆಗೈದ ದುಷ್ಕರ್ಮಿಗಳ ತಂಡ ಏಕಕಾಲದಲ್ಲಿ ಎರಡು ಸ್ಕೂಟರ್ ದರೋಡೆಗೈದ ಘಟನೆ ರಾ.ಹೆ. 66ರ ಅಂಬಿಕಾರೋಡ್ ಮತ್ತು ಉಚ್ಚಿಲ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ 11.10 ರ ಸಮಯದಲ್ಲಿ ತಲಪಾಡಿ, ನಾರ್ಲಗುತ್ತು ನಿವಾಸಿ ಹರ್ಷಿತ್ ಎಂಬವರು ಔಷಧಿ ಖರೀದಿಸಲು ತನ್ನ ಆ್ಯಕ್ಸಸ್ 125 ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಚ್ಚಿಲ ಬಸ್ ಸ್ಟಾಪ್ ಬಳಿಯಲ್ಲಿದ್ದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈ ಸನ್ನೆ ಮಾಡಿ ತಡೆದಿದ್ದಾರೆ. ಮೂವರು ಅಪರಿಚಿತರು ಹರ್ಷಿತ್ ಗೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ, ಓರ್ವನು ತನ್ನ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಎಡಭುಜಕ್ಕೆ ಹೊಡೆದು ಗಾಯಗೊಳಿಸಿ ಸ್ಕೂಟರನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಅದೇ ದಿನ ರಾತ್ರಿ 11.30 ರ ವೇಳೆ ಮಂಜೇಶ್ವರ ನಿವಾಸಿ ಪ್ರಫುಲ್ ರಾಜ್ ಎಂಬವರು ಕುತ್ತಾರು ,ಪಂಡಿತ್ ಹೌಸ್ನ ತನ್ನ ಅಜ್ಜಿ ಮನೆಗೆ ಟಿವಿಎಸ್ ಟಾರ್ಕ್ ಸ್ಕೂಟರಲ್ಲಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿ 3 ಜನ ಆಗಂತುಕರು ತಡೆದಿದ್ದಾರೆ. ಆಗಂತುಕರು ಪ್ರಪುಲ್ ರಾಜನ್ನ ಉದ್ದೇಶಿಸಿ ಅರೆ ಸಾಲೆ, ರುಕ್ ರುಕ್ ಎಂದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಒಬ್ಬಾತ ಕಬ್ಬಿಣದ ಸರಳಿನಿಂದ ಪ್ರಪುಲ್ ಅವರ ಎಡಭುಜಕ್ಕೆ ಹೊಡೆದು ಹಲ್ಲೆ ನಡೆಸಿ ಸ್ಕೂಟರನ್ನ ದರೋಡೆಗೈದಿದ್ದಾರೆ. ದರೋಡೆಯಿಂದ ಗಾಯಗೊಂಡ ಹರ್ಷಿತ್ ಮತ್ತು ಪ್ರಫುಲ್ ರಾಜ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
2 two Wheeler's stolen after attacking men with iron rod and abusing them at NH 66 in Uchila Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm