ಬ್ರೇಕಿಂಗ್ ನ್ಯೂಸ್
19-11-22 12:56 pm Mangalore Correspondent ಕ್ರೈಂ
ಉಳ್ಳಾಲ, ನ.19 : ದ್ವಿಚಕ್ರ ವಾಹನ ಸವಾರರನ್ನ ತಡೆದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಡಿನಿಂದ ಹಲ್ಲೆಗೈದ ದುಷ್ಕರ್ಮಿಗಳ ತಂಡ ಏಕಕಾಲದಲ್ಲಿ ಎರಡು ಸ್ಕೂಟರ್ ದರೋಡೆಗೈದ ಘಟನೆ ರಾ.ಹೆ. 66ರ ಅಂಬಿಕಾರೋಡ್ ಮತ್ತು ಉಚ್ಚಿಲ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ 11.10 ರ ಸಮಯದಲ್ಲಿ ತಲಪಾಡಿ, ನಾರ್ಲಗುತ್ತು ನಿವಾಸಿ ಹರ್ಷಿತ್ ಎಂಬವರು ಔಷಧಿ ಖರೀದಿಸಲು ತನ್ನ ಆ್ಯಕ್ಸಸ್ 125 ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಚ್ಚಿಲ ಬಸ್ ಸ್ಟಾಪ್ ಬಳಿಯಲ್ಲಿದ್ದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈ ಸನ್ನೆ ಮಾಡಿ ತಡೆದಿದ್ದಾರೆ. ಮೂವರು ಅಪರಿಚಿತರು ಹರ್ಷಿತ್ ಗೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ, ಓರ್ವನು ತನ್ನ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಎಡಭುಜಕ್ಕೆ ಹೊಡೆದು ಗಾಯಗೊಳಿಸಿ ಸ್ಕೂಟರನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಅದೇ ದಿನ ರಾತ್ರಿ 11.30 ರ ವೇಳೆ ಮಂಜೇಶ್ವರ ನಿವಾಸಿ ಪ್ರಫುಲ್ ರಾಜ್ ಎಂಬವರು ಕುತ್ತಾರು ,ಪಂಡಿತ್ ಹೌಸ್ನ ತನ್ನ ಅಜ್ಜಿ ಮನೆಗೆ ಟಿವಿಎಸ್ ಟಾರ್ಕ್ ಸ್ಕೂಟರಲ್ಲಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿ 3 ಜನ ಆಗಂತುಕರು ತಡೆದಿದ್ದಾರೆ. ಆಗಂತುಕರು ಪ್ರಪುಲ್ ರಾಜನ್ನ ಉದ್ದೇಶಿಸಿ ಅರೆ ಸಾಲೆ, ರುಕ್ ರುಕ್ ಎಂದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಒಬ್ಬಾತ ಕಬ್ಬಿಣದ ಸರಳಿನಿಂದ ಪ್ರಪುಲ್ ಅವರ ಎಡಭುಜಕ್ಕೆ ಹೊಡೆದು ಹಲ್ಲೆ ನಡೆಸಿ ಸ್ಕೂಟರನ್ನ ದರೋಡೆಗೈದಿದ್ದಾರೆ. ದರೋಡೆಯಿಂದ ಗಾಯಗೊಂಡ ಹರ್ಷಿತ್ ಮತ್ತು ಪ್ರಫುಲ್ ರಾಜ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
2 two Wheeler's stolen after attacking men with iron rod and abusing them at NH 66 in Uchila Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm