ಬ್ರೇಕಿಂಗ್ ನ್ಯೂಸ್
19-11-22 12:56 pm Mangalore Correspondent ಕ್ರೈಂ
ಉಳ್ಳಾಲ, ನ.19 : ದ್ವಿಚಕ್ರ ವಾಹನ ಸವಾರರನ್ನ ತಡೆದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಡಿನಿಂದ ಹಲ್ಲೆಗೈದ ದುಷ್ಕರ್ಮಿಗಳ ತಂಡ ಏಕಕಾಲದಲ್ಲಿ ಎರಡು ಸ್ಕೂಟರ್ ದರೋಡೆಗೈದ ಘಟನೆ ರಾ.ಹೆ. 66ರ ಅಂಬಿಕಾರೋಡ್ ಮತ್ತು ಉಚ್ಚಿಲ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ 11.10 ರ ಸಮಯದಲ್ಲಿ ತಲಪಾಡಿ, ನಾರ್ಲಗುತ್ತು ನಿವಾಸಿ ಹರ್ಷಿತ್ ಎಂಬವರು ಔಷಧಿ ಖರೀದಿಸಲು ತನ್ನ ಆ್ಯಕ್ಸಸ್ 125 ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಚ್ಚಿಲ ಬಸ್ ಸ್ಟಾಪ್ ಬಳಿಯಲ್ಲಿದ್ದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈ ಸನ್ನೆ ಮಾಡಿ ತಡೆದಿದ್ದಾರೆ. ಮೂವರು ಅಪರಿಚಿತರು ಹರ್ಷಿತ್ ಗೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ, ಓರ್ವನು ತನ್ನ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಎಡಭುಜಕ್ಕೆ ಹೊಡೆದು ಗಾಯಗೊಳಿಸಿ ಸ್ಕೂಟರನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಅದೇ ದಿನ ರಾತ್ರಿ 11.30 ರ ವೇಳೆ ಮಂಜೇಶ್ವರ ನಿವಾಸಿ ಪ್ರಫುಲ್ ರಾಜ್ ಎಂಬವರು ಕುತ್ತಾರು ,ಪಂಡಿತ್ ಹೌಸ್ನ ತನ್ನ ಅಜ್ಜಿ ಮನೆಗೆ ಟಿವಿಎಸ್ ಟಾರ್ಕ್ ಸ್ಕೂಟರಲ್ಲಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿ 3 ಜನ ಆಗಂತುಕರು ತಡೆದಿದ್ದಾರೆ. ಆಗಂತುಕರು ಪ್ರಪುಲ್ ರಾಜನ್ನ ಉದ್ದೇಶಿಸಿ ಅರೆ ಸಾಲೆ, ರುಕ್ ರುಕ್ ಎಂದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಒಬ್ಬಾತ ಕಬ್ಬಿಣದ ಸರಳಿನಿಂದ ಪ್ರಪುಲ್ ಅವರ ಎಡಭುಜಕ್ಕೆ ಹೊಡೆದು ಹಲ್ಲೆ ನಡೆಸಿ ಸ್ಕೂಟರನ್ನ ದರೋಡೆಗೈದಿದ್ದಾರೆ. ದರೋಡೆಯಿಂದ ಗಾಯಗೊಂಡ ಹರ್ಷಿತ್ ಮತ್ತು ಪ್ರಫುಲ್ ರಾಜ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
2 two Wheeler's stolen after attacking men with iron rod and abusing them at NH 66 in Uchila Mangalore.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm