ಬ್ರೇಕಿಂಗ್ ನ್ಯೂಸ್
19-11-22 12:56 pm Mangalore Correspondent ಕ್ರೈಂ
ಉಳ್ಳಾಲ, ನ.19 : ದ್ವಿಚಕ್ರ ವಾಹನ ಸವಾರರನ್ನ ತಡೆದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಡಿನಿಂದ ಹಲ್ಲೆಗೈದ ದುಷ್ಕರ್ಮಿಗಳ ತಂಡ ಏಕಕಾಲದಲ್ಲಿ ಎರಡು ಸ್ಕೂಟರ್ ದರೋಡೆಗೈದ ಘಟನೆ ರಾ.ಹೆ. 66ರ ಅಂಬಿಕಾರೋಡ್ ಮತ್ತು ಉಚ್ಚಿಲ ಎಂಬಲ್ಲಿ ನಡೆದಿದೆ.
ಗುರುವಾರ ರಾತ್ರಿ 11.10 ರ ಸಮಯದಲ್ಲಿ ತಲಪಾಡಿ, ನಾರ್ಲಗುತ್ತು ನಿವಾಸಿ ಹರ್ಷಿತ್ ಎಂಬವರು ಔಷಧಿ ಖರೀದಿಸಲು ತನ್ನ ಆ್ಯಕ್ಸಸ್ 125 ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಚ್ಚಿಲ ಬಸ್ ಸ್ಟಾಪ್ ಬಳಿಯಲ್ಲಿದ್ದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈ ಸನ್ನೆ ಮಾಡಿ ತಡೆದಿದ್ದಾರೆ. ಮೂವರು ಅಪರಿಚಿತರು ಹರ್ಷಿತ್ ಗೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದುದಲ್ಲದೆ, ಓರ್ವನು ತನ್ನ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಎಡಭುಜಕ್ಕೆ ಹೊಡೆದು ಗಾಯಗೊಳಿಸಿ ಸ್ಕೂಟರನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಅದೇ ದಿನ ರಾತ್ರಿ 11.30 ರ ವೇಳೆ ಮಂಜೇಶ್ವರ ನಿವಾಸಿ ಪ್ರಫುಲ್ ರಾಜ್ ಎಂಬವರು ಕುತ್ತಾರು ,ಪಂಡಿತ್ ಹೌಸ್ನ ತನ್ನ ಅಜ್ಜಿ ಮನೆಗೆ ಟಿವಿಎಸ್ ಟಾರ್ಕ್ ಸ್ಕೂಟರಲ್ಲಿ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿ 3 ಜನ ಆಗಂತುಕರು ತಡೆದಿದ್ದಾರೆ. ಆಗಂತುಕರು ಪ್ರಪುಲ್ ರಾಜನ್ನ ಉದ್ದೇಶಿಸಿ ಅರೆ ಸಾಲೆ, ರುಕ್ ರುಕ್ ಎಂದು ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಪೈಕಿ ಒಬ್ಬಾತ ಕಬ್ಬಿಣದ ಸರಳಿನಿಂದ ಪ್ರಪುಲ್ ಅವರ ಎಡಭುಜಕ್ಕೆ ಹೊಡೆದು ಹಲ್ಲೆ ನಡೆಸಿ ಸ್ಕೂಟರನ್ನ ದರೋಡೆಗೈದಿದ್ದಾರೆ. ದರೋಡೆಯಿಂದ ಗಾಯಗೊಂಡ ಹರ್ಷಿತ್ ಮತ್ತು ಪ್ರಫುಲ್ ರಾಜ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
2 two Wheeler's stolen after attacking men with iron rod and abusing them at NH 66 in Uchila Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm