ಬ್ರೇಕಿಂಗ್ ನ್ಯೂಸ್
06-12-22 04:21 pm HK News Desk ಕ್ರೈಂ
ನವದೆಹಲಿ, ಡಿ.6: ಆಸ್ತಿ ವಿವಾದಕ್ಕೆ ಸಂಬಂಧಿಸಿ 24 ವರ್ಷದ ಸೋದರ ಸಂಬಂಧಿಯ ರುಂಡವನ್ನು 20 ವರ್ಷದ ಬುಡಕಟ್ಟು ವ್ಯಕ್ತಿ ಹಾಗೂ ಆತನ ಸ್ನೇಹಿತರು ಕತ್ತರಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸ್ನೇಹಿತ ಆ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಕುಂತಿ ಜಿಲ್ಲೆಯ ಮುರ್ಹು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಡಿಸೆಂಬರ್ 2 ರಂದು ಮೃತನ ತಂದೆ ದೂರು ದಾಖಲಿಸಿದ ನಂತರ ಪ್ರಮುಖ ಆರೋಪಿ, ಆತನ ಹೆಂಡತಿ ಸೇರಿ ಆರು ಮಂದಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮಗ ಕಾನು ಮುಂಡಾ ಮನೆಯಲ್ಲಿ ಒಬ್ಬನೇ ಇದ್ದಾಗ ಆತನ ಸೋದರ ಸಂಬಂಧಿ ಸಾಗರ್ ಮುಂಡಾ ಹಾಗೂ ಆತನ ಸ್ನೇಹಿತರು ಅಪಹರಿಸಿರುವುದಾಗಿ ಗ್ರಾಮಸ್ಥರು ತಿಳಿಸಿದ್ದು ಕೊಲೆಯಾದ ವ್ಯಕ್ತಿಯ ತಂದೆ ದೂರಿನಲ್ಲಿ ಹೇಳಿದ್ದರು. ಕಾನು ಪತ್ತೆಯಾಗದಿದ್ದಾಗ ಅವರ ತಂದೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.
ಕುಂತಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ತಂಡವೊಂದನ್ನು ರಚಿಸಲಾಗಿತ್ತು. ಆರೋಪಿಗಳ ಬಂಧನ ನಂತರ ಕುಮಾಂಗ್ ಗೊಪ್ಲಾ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾದರೆ, ಅಲ್ಲಿಂದ 15 ಕಿ.ಮೀ ದೂರದಲ್ಲಿರುವ ದುಲ್ವಾ ತುಂಗ್ರಿ ಅರಣ್ಯದಲ್ಲಿ ರುಂಡ ಪತ್ತೆಯಾಗಿದೆ ಎಂದು ಮುರ್ಹು ಪೊಲೀಸ್ ಠಾಣಾಧಿಕಾರಿ ಚುಂಡಮಣಿ ತುಡು ಹೇಳಿದ್ದಾರೆ.
ಆರೋಪಿಗಳು ಕಡಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಆರೋಪಿಗಳಿಂದ ಐದು ಮೊಬೈಲ್ ಫೋನ್ ಗಳು, ಮಾರಕಾಸ್ತ್ರಗಳು, ಕೊಡಲಿ ಮತ್ತು ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ತುಂಡು ಭೂಮಿಗಾಗಿ ಆರೋಪಿಗಳು ಮತ್ತು ಕೊಲೆಯಾದ ಯುವಕರ ಕುಟುಂಬದ ಮಧ್ಯೆ ದ್ವೇಷವಿತ್ತು. ಇದೇ ಕಾರಣದಿಂದ ಆತನ ತಲೆ ಕಡಿಯಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
A 20-year-old man allegedly beheaded his 24-year-old cousin after abducting him over a land dispute, after which the friends of the accused even took a selfie with the severed head in Jharkhand's Khunti district, said the police on Monday.Following a complaint by the father of the deceased in Murhu village on Friday, cops arrested six people, including the main accused and his wife.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm