ಬ್ರೇಕಿಂಗ್ ನ್ಯೂಸ್
15-10-20 09:47 am Headline Karnataka News Network ಕ್ರೈಂ
ಹರಿಯಾಣ,ಅಕ್ಟೋಬರ್. 15 : 35 ವರ್ಷದ ಮಹಿಳೆಯೊಬ್ಬರನ್ನ ಆಕೆಯ ಪತಿ ಕಳೆದ ಸುಮಾರು ಒಂದೂವರೆ ವರ್ಷದಿಂದ ಟಾಯ್ಲೆಟ್ನಲ್ಲಿ ಬಂಧಿಸಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹರಿಯಾಣದ ಪಾಣಿಪತ್ ಜಿಲ್ಲೆಯ ರಿಶ್ಪುರ್ನಲ್ಲಿ ಈ ಘಟನೆ ನಡೆದಿದೆ.
ಮೂರು ಮಕ್ಕಳ ತಾಯಿಯಾದ ಮಹಿಳೆ ಗಬ್ಬುನಾರುವ ಟಾಯ್ಲೆಟ್ನಲ್ಲಿ ಶಕ್ತಿಹೀನರಾಗಿದ್ದ ಬಿದ್ದಿದ್ದರು. ಮಹಿಳೆಯನ್ನ ಬಂಧನದಲ್ಲಿಟ್ಟಿರುವ ಬಗ್ಗೆ ಮಾಹಿತಿ ಬಂದಿದ್ದ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಜನಿ ಗುಪ್ತಾ, ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿ ಆಕೆಯನ್ನ ನಿನ್ನೆ ರಕ್ಷಣೆ ಮಾಡಿದ್ದಾರೆ. ಮೊದಲಿಗೆ ಮಹಿಳೆಯನ್ನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಸೋದರ ಸಂಬಂಧಿಯ ಮನೆಗೆ ಕಳಿಸಲಾಗಿದೆ.

ಮಹಿಳೆ ದಯಾನೀಯ ಸ್ಥಿತಿಯಲ್ಲಿದ್ದರು, ಆಕೆಯನ್ನ ಕಳೆದ ಒಂದೂವರೆ ವರ್ಷದಿಂದ ಈ ಚಿಕ್ಕ ಟಾಯ್ಲೆಟ್ನಲ್ಲೇ ಇರಿಸಲಾಗಿತ್ತು ಅಂತ ತನಿಖೆಯಿಂದ ತಿಳಿದುಬಂದಿದೆ. ಆಕೆ ಶಕ್ತಿಹೀನರಾಗಿದ್ರು. ನಡೆಯುವ ಸ್ಥಿತಿಯಲ್ಲಿ ಕೂಡ ಇರಲಿಲ್ಲ. ನಾವು ಊಟ ಕೊಟ್ಟಾಗ ಒಮ್ಮೆಲೆ 8 ಚಪಾತಿ ತಿಂದರು. ಬಂಧನದಲ್ಲಿದ್ದಾಗ ಮಹಿಳೆಗೆ ಸರಿಯಾಗಿ ಊಟ-ನೀರು ಕೂಡ ಕೊಟ್ಟಿಲ್ಲ ಎಂದು ರಜನಿ ಗುಪ್ತಾ ಹೇಳಿದ್ದಾರೆ.
ಮಹಿಳೆಗೆ 17 ವರ್ಷಗಳ ಹಿಂದೆ ನರೇಶ್ ಕುಮಾರ್ ಎಂಬಾತನ ಜೊತೆ ವಿವಾಹವಾಗಿದ್ದು, ದಂಪತಿಗೆ 15 ವರ್ಷದ ಪುತ್ರಿ ಹಾಗೂ 13 ಮತ್ತು 11 ವರ್ಷದ ಇಬ್ಬರು ಪುತ್ರರಿದ್ದಾರೆ. ನರೇಶ್ ತನ್ನ ಪತ್ನಿಗೆ ಮಾನಸಿಕ ಸಮಸ್ಯೆ ಇದೆ ಎಂದು ಹೇಳಿಕೊಂಡಿದ್ದಾನೆ. ಆದ್ರೆ ಮಹಿಳೆ ನಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ರು, ಎಲ್ಲಾ ಕುಟುಂಬ ಸದಸ್ಯರನ್ನ ಗುರುತಿಸಿದ್ರು. ಮಹಿಳೆಗೆ ಮಾನಸಿಕ ಕಾಯಿಲೆಯ ಚಿಕಿತ್ಸೆ ಕೊಡಿಸಿರುವ ಯಾವುದೇ ದಾಖಲೆ ಒದಗಿಸುವಲ್ಲಿ ಪತಿ ವಿಫಲನಾಗಿದ್ದಾನೆ ಎಂದು ಗಪ್ತಾ ಹೇಳಿದ್ದಾರೆ.
ಈ ಸಂಬಂಧ ಐಪಿಸಿ ಸೆಕ್ಷನ್ 498ಎ ಹಾಗೂ 342 ಅಡಿ ಪ್ರಕರಣ ದಾಖಲಿಸಿ ಪತಿ ನರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.
A woman who was allegedly locked inside a toilet for over a year by her husband was rescued by Women Protection&Child Marriage Prohibition Officer in Panipat.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm