ಬ್ರೇಕಿಂಗ್ ನ್ಯೂಸ್
15-10-20 09:47 am Headline Karnataka News Network ಕ್ರೈಂ
ಹರಿಯಾಣ,ಅಕ್ಟೋಬರ್. 15 : 35 ವರ್ಷದ ಮಹಿಳೆಯೊಬ್ಬರನ್ನ ಆಕೆಯ ಪತಿ ಕಳೆದ ಸುಮಾರು ಒಂದೂವರೆ ವರ್ಷದಿಂದ ಟಾಯ್ಲೆಟ್ನಲ್ಲಿ ಬಂಧಿಸಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹರಿಯಾಣದ ಪಾಣಿಪತ್ ಜಿಲ್ಲೆಯ ರಿಶ್ಪುರ್ನಲ್ಲಿ ಈ ಘಟನೆ ನಡೆದಿದೆ.
ಮೂರು ಮಕ್ಕಳ ತಾಯಿಯಾದ ಮಹಿಳೆ ಗಬ್ಬುನಾರುವ ಟಾಯ್ಲೆಟ್ನಲ್ಲಿ ಶಕ್ತಿಹೀನರಾಗಿದ್ದ ಬಿದ್ದಿದ್ದರು. ಮಹಿಳೆಯನ್ನ ಬಂಧನದಲ್ಲಿಟ್ಟಿರುವ ಬಗ್ಗೆ ಮಾಹಿತಿ ಬಂದಿದ್ದ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಜನಿ ಗುಪ್ತಾ, ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿ ಆಕೆಯನ್ನ ನಿನ್ನೆ ರಕ್ಷಣೆ ಮಾಡಿದ್ದಾರೆ. ಮೊದಲಿಗೆ ಮಹಿಳೆಯನ್ನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಸೋದರ ಸಂಬಂಧಿಯ ಮನೆಗೆ ಕಳಿಸಲಾಗಿದೆ.
ಮಹಿಳೆ ದಯಾನೀಯ ಸ್ಥಿತಿಯಲ್ಲಿದ್ದರು, ಆಕೆಯನ್ನ ಕಳೆದ ಒಂದೂವರೆ ವರ್ಷದಿಂದ ಈ ಚಿಕ್ಕ ಟಾಯ್ಲೆಟ್ನಲ್ಲೇ ಇರಿಸಲಾಗಿತ್ತು ಅಂತ ತನಿಖೆಯಿಂದ ತಿಳಿದುಬಂದಿದೆ. ಆಕೆ ಶಕ್ತಿಹೀನರಾಗಿದ್ರು. ನಡೆಯುವ ಸ್ಥಿತಿಯಲ್ಲಿ ಕೂಡ ಇರಲಿಲ್ಲ. ನಾವು ಊಟ ಕೊಟ್ಟಾಗ ಒಮ್ಮೆಲೆ 8 ಚಪಾತಿ ತಿಂದರು. ಬಂಧನದಲ್ಲಿದ್ದಾಗ ಮಹಿಳೆಗೆ ಸರಿಯಾಗಿ ಊಟ-ನೀರು ಕೂಡ ಕೊಟ್ಟಿಲ್ಲ ಎಂದು ರಜನಿ ಗುಪ್ತಾ ಹೇಳಿದ್ದಾರೆ.
ಮಹಿಳೆಗೆ 17 ವರ್ಷಗಳ ಹಿಂದೆ ನರೇಶ್ ಕುಮಾರ್ ಎಂಬಾತನ ಜೊತೆ ವಿವಾಹವಾಗಿದ್ದು, ದಂಪತಿಗೆ 15 ವರ್ಷದ ಪುತ್ರಿ ಹಾಗೂ 13 ಮತ್ತು 11 ವರ್ಷದ ಇಬ್ಬರು ಪುತ್ರರಿದ್ದಾರೆ. ನರೇಶ್ ತನ್ನ ಪತ್ನಿಗೆ ಮಾನಸಿಕ ಸಮಸ್ಯೆ ಇದೆ ಎಂದು ಹೇಳಿಕೊಂಡಿದ್ದಾನೆ. ಆದ್ರೆ ಮಹಿಳೆ ನಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ರು, ಎಲ್ಲಾ ಕುಟುಂಬ ಸದಸ್ಯರನ್ನ ಗುರುತಿಸಿದ್ರು. ಮಹಿಳೆಗೆ ಮಾನಸಿಕ ಕಾಯಿಲೆಯ ಚಿಕಿತ್ಸೆ ಕೊಡಿಸಿರುವ ಯಾವುದೇ ದಾಖಲೆ ಒದಗಿಸುವಲ್ಲಿ ಪತಿ ವಿಫಲನಾಗಿದ್ದಾನೆ ಎಂದು ಗಪ್ತಾ ಹೇಳಿದ್ದಾರೆ.
ಈ ಸಂಬಂಧ ಐಪಿಸಿ ಸೆಕ್ಷನ್ 498ಎ ಹಾಗೂ 342 ಅಡಿ ಪ್ರಕರಣ ದಾಖಲಿಸಿ ಪತಿ ನರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.
A woman who was allegedly locked inside a toilet for over a year by her husband was rescued by Women Protection&Child Marriage Prohibition Officer in Panipat.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm