ಬ್ರೇಕಿಂಗ್ ನ್ಯೂಸ್
15-10-20 09:47 am Headline Karnataka News Network ಕ್ರೈಂ
ಹರಿಯಾಣ,ಅಕ್ಟೋಬರ್. 15 : 35 ವರ್ಷದ ಮಹಿಳೆಯೊಬ್ಬರನ್ನ ಆಕೆಯ ಪತಿ ಕಳೆದ ಸುಮಾರು ಒಂದೂವರೆ ವರ್ಷದಿಂದ ಟಾಯ್ಲೆಟ್ನಲ್ಲಿ ಬಂಧಿಸಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹರಿಯಾಣದ ಪಾಣಿಪತ್ ಜಿಲ್ಲೆಯ ರಿಶ್ಪುರ್ನಲ್ಲಿ ಈ ಘಟನೆ ನಡೆದಿದೆ.
ಮೂರು ಮಕ್ಕಳ ತಾಯಿಯಾದ ಮಹಿಳೆ ಗಬ್ಬುನಾರುವ ಟಾಯ್ಲೆಟ್ನಲ್ಲಿ ಶಕ್ತಿಹೀನರಾಗಿದ್ದ ಬಿದ್ದಿದ್ದರು. ಮಹಿಳೆಯನ್ನ ಬಂಧನದಲ್ಲಿಟ್ಟಿರುವ ಬಗ್ಗೆ ಮಾಹಿತಿ ಬಂದಿದ್ದ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಜನಿ ಗುಪ್ತಾ, ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿ ಆಕೆಯನ್ನ ನಿನ್ನೆ ರಕ್ಷಣೆ ಮಾಡಿದ್ದಾರೆ. ಮೊದಲಿಗೆ ಮಹಿಳೆಯನ್ನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಸೋದರ ಸಂಬಂಧಿಯ ಮನೆಗೆ ಕಳಿಸಲಾಗಿದೆ.

ಮಹಿಳೆ ದಯಾನೀಯ ಸ್ಥಿತಿಯಲ್ಲಿದ್ದರು, ಆಕೆಯನ್ನ ಕಳೆದ ಒಂದೂವರೆ ವರ್ಷದಿಂದ ಈ ಚಿಕ್ಕ ಟಾಯ್ಲೆಟ್ನಲ್ಲೇ ಇರಿಸಲಾಗಿತ್ತು ಅಂತ ತನಿಖೆಯಿಂದ ತಿಳಿದುಬಂದಿದೆ. ಆಕೆ ಶಕ್ತಿಹೀನರಾಗಿದ್ರು. ನಡೆಯುವ ಸ್ಥಿತಿಯಲ್ಲಿ ಕೂಡ ಇರಲಿಲ್ಲ. ನಾವು ಊಟ ಕೊಟ್ಟಾಗ ಒಮ್ಮೆಲೆ 8 ಚಪಾತಿ ತಿಂದರು. ಬಂಧನದಲ್ಲಿದ್ದಾಗ ಮಹಿಳೆಗೆ ಸರಿಯಾಗಿ ಊಟ-ನೀರು ಕೂಡ ಕೊಟ್ಟಿಲ್ಲ ಎಂದು ರಜನಿ ಗುಪ್ತಾ ಹೇಳಿದ್ದಾರೆ.
ಮಹಿಳೆಗೆ 17 ವರ್ಷಗಳ ಹಿಂದೆ ನರೇಶ್ ಕುಮಾರ್ ಎಂಬಾತನ ಜೊತೆ ವಿವಾಹವಾಗಿದ್ದು, ದಂಪತಿಗೆ 15 ವರ್ಷದ ಪುತ್ರಿ ಹಾಗೂ 13 ಮತ್ತು 11 ವರ್ಷದ ಇಬ್ಬರು ಪುತ್ರರಿದ್ದಾರೆ. ನರೇಶ್ ತನ್ನ ಪತ್ನಿಗೆ ಮಾನಸಿಕ ಸಮಸ್ಯೆ ಇದೆ ಎಂದು ಹೇಳಿಕೊಂಡಿದ್ದಾನೆ. ಆದ್ರೆ ಮಹಿಳೆ ನಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ರು, ಎಲ್ಲಾ ಕುಟುಂಬ ಸದಸ್ಯರನ್ನ ಗುರುತಿಸಿದ್ರು. ಮಹಿಳೆಗೆ ಮಾನಸಿಕ ಕಾಯಿಲೆಯ ಚಿಕಿತ್ಸೆ ಕೊಡಿಸಿರುವ ಯಾವುದೇ ದಾಖಲೆ ಒದಗಿಸುವಲ್ಲಿ ಪತಿ ವಿಫಲನಾಗಿದ್ದಾನೆ ಎಂದು ಗಪ್ತಾ ಹೇಳಿದ್ದಾರೆ.
ಈ ಸಂಬಂಧ ಐಪಿಸಿ ಸೆಕ್ಷನ್ 498ಎ ಹಾಗೂ 342 ಅಡಿ ಪ್ರಕರಣ ದಾಖಲಿಸಿ ಪತಿ ನರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.
A woman who was allegedly locked inside a toilet for over a year by her husband was rescued by Women Protection&Child Marriage Prohibition Officer in Panipat.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm