ಬ್ರೇಕಿಂಗ್ ನ್ಯೂಸ್
09-12-22 10:17 pm Bangalore Correspondent ಕ್ರೈಂ
ಬೆಂಗಳೂರು, ಡಿ.9 : ಸಿಗರೇಟ್ ಹಣ ಕೇಳಿದ್ದಕ್ಕೆ ಪುಡಿ ರೌಡಿಗಳ ಗುಂಪು ಬೇಕರಿಯೊಂದರಲ್ಲಿ ದಾಂಧಲೆ ನಡೆಸಿದ್ದು ಅಲ್ಲಿನ ಸಿಬಂದಿಗೆ ಯತ್ವಾತದ್ವಾ ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿಯ ಬ್ರಹ್ಮಲಿಂಗೇಶ್ವರ ಬೇಕರಿಯಲ್ಲಿ ಡಿ.8ರ ರಾತ್ರಿ ಘಟನೆ ನಡೆದಿದ್ದು ಎಚ್ ಎಎಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇಬ್ಬರು ಯುವಕರು ಬೇಕರಿಯಲ್ಲಿ ಮೂರು ಸಿಗರೇಟ್ ಪಡೆದಿದ್ದರು. ಸಿಬಂದಿ ಸಿಗರೇಟ್ ಕೊಟ್ಟು ಹಣ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ಮತ್ತೊಂದಷ್ಟು ಯುವಕರು ಸ್ಥಳಕ್ಕೆ ಬಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಮನಸೋ ಇಚ್ಚೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹಲ್ಲೆಗೆ ಒಳಗಾದವರು ಉಡುಪಿ ಜಿಲ್ಲೆಯ ಬೈಂದೂರು ಮೂಲದ ಹುಡುಗರು ಎನ್ನಲಾಗಿದೆ.





ಪುಡಿ ರೌಡಿಗಳ ಪುಂಡಾಟ ತಿಳಿಯುತ್ತಿದ್ದಂತೆ ದಕ್ಷಿಣ ಕನ್ನಡ, ಉಡುಪಿ ಮೂಲದ ವ್ಯಾಪಾರಿಗಳು, ಉದ್ಯಮಿಗಳು ಎಚ್ ಎ ಎಲ್ ಠಾಣೆ ಮುಂದೆ ಜಮಾಯಿಸಿದ್ದಾರೆ. 50ಕ್ಕೂ ಹೆಚ್ಚು ಜನರು ಠಾಣೆ ಎದುರು ಪ್ರತಿಭಟನೆಗೆ ಮುಂದಾಗಿದ್ದರು. ಠಾಣೆ ಬಳಿ ಆಗಮಿಸಿದ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪೊಲೀಸರ ಜೊತೆ ಚರ್ಚೆ ನಡೆಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆಗೊಳಗಾದ ನವೀನ್, ಪ್ರಜ್ವಲ್, ನಿತಿನ್ ಹೆಚ್ ಎ ಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಯುವಕರು, ಸಿಗರೇಟ್ ಕೇಳಿ, ಧಣಿ ಎಲ್ಲಿ ಅಂತ ಕೇಳಿದ್ದಾರೆ. ಹೊರಗಡೆ ಹೋಗಿದ್ದಾಗಿ ತಿಳಿಸಿದ್ದೆವು. ಮೂರು ಸಿಗರೇಟ್ ಪಡೆದಿದ್ದಕ್ಕೆ ಹಣ ಕೇಳಿದ್ದೆವು. ಸ್ವಲ್ಪ ಹೊತ್ತಿನ ಬಳಿಕ ಬೇರೆ ಒಂದಷ್ಟು ಮಂದಿಯನ್ನು ಕರೆದು ಹಲ್ಲೆ ನಡೆಸಿದ್ದಾರೆ. ಯಾರೆಂದು ಪರಿಚಯ ಇಲ್ಲ. ಅವರನ್ನು ಮೊದಲ ಬಾರಿ ನೋಡಿದ್ದು ಎಂದು ತಿಳಿಸಿದ್ದಾರೆ.
ದಾಂಧಲೆ ಘಟನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಸೂಚಿಸಿದ್ದಾರೆ. ಘಟನೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.
Goons brutally thrash Bakery employees of #Udupi, #Byndoor for asking for cigarette money near #Kundalahalligate in #Bangalore #BreakingNews pic.twitter.com/oLBWIvH7Bx
— Headline Karnataka (@hknewsonline) December 9, 2022
Bangalore Goons attack Udupi Byndoor youths after asking for cigarette money near Kundalahalli gate. The video of this has gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am