ಬ್ರೇಕಿಂಗ್ ನ್ಯೂಸ್
13-12-22 11:56 am Mangalore Correspondent ಕ್ರೈಂ
ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.

ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
Mangalore Girl sexually harassed in Ullal, Bajarang dal members demand for arrest, POSCO case registered.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm