ಬ್ರೇಕಿಂಗ್ ನ್ಯೂಸ್
13-12-22 11:56 am Mangalore Correspondent ಕ್ರೈಂ
ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.

ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
Mangalore Girl sexually harassed in Ullal, Bajarang dal members demand for arrest, POSCO case registered.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm