ಬ್ರೇಕಿಂಗ್ ನ್ಯೂಸ್
13-12-22 11:56 am Mangalore Correspondent ಕ್ರೈಂ
ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.

ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
Mangalore Girl sexually harassed in Ullal, Bajarang dal members demand for arrest, POSCO case registered.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am