ಬ್ರೇಕಿಂಗ್ ನ್ಯೂಸ್
13-12-22 11:56 am Mangalore Correspondent ಕ್ರೈಂ
ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.

ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
Mangalore Girl sexually harassed in Ullal, Bajarang dal members demand for arrest, POSCO case registered.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am