ಬ್ರೇಕಿಂಗ್ ನ್ಯೂಸ್
            
                        13-12-22 11:56 am Mangalore Correspondent ಕ್ರೈಂ
            ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.

ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
            
            
            Mangalore Girl sexually harassed in Ullal, Bajarang dal members demand for arrest, POSCO case registered.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm