ಬ್ರೇಕಿಂಗ್ ನ್ಯೂಸ್
13-12-22 11:56 am Mangalore Correspondent ಕ್ರೈಂ
ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.
ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
Mangalore Girl sexually harassed in Ullal, Bajarang dal members demand for arrest, POSCO case registered.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm