ಬ್ರೇಕಿಂಗ್ ನ್ಯೂಸ್
14-12-22 12:42 pm Bangalore Correspondent ಕ್ರೈಂ
ಬೆಂಗಳೂರು, ಡಿ.14: ಕನ್ನಡದ ಹಿರಿಯ ನಟಿ ಅಭಿನಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ಅತ್ತಿಗೆಗೆ ವರದಕ್ಷಿಣಿ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಭಿನಯಾ ಅವರ ತಾಯಿ ಜಯಮ್ಮಗೆ 5 ವರ್ಷ ಜೈಲು ಶಿಕ್ಷೆ ನೀಡಲಾಗಿದೆ.
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ವರದಕ್ಷಿಣೆ ಕಿರುಕುಳದ ಬಗ್ಗೆ ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಜಯಮ್ಮಗೆ 5 ವರ್ಷ ಶಿಕ್ಷೆ ಹಾಗೂ ಅಭಿನಯಾ ಸಹೋದರ ಚೆಲುವರಾಜ್ಗೆ 2 ವರ್ಷ ಶಿಕ್ಷೆ ನೀಡಲಾಗಿದೆ.
ಬಣ್ಣದ ಲೋಕದಲ್ಲಿ ಅಭಿನಯಾ ಅವರು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಚೊಚ್ಚಲ ಸಿನಿಮಾ ‘ಅನುಭವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. 1998ರಲ್ಲಿ ಅಭಿನಯಾ ಸಹೋದರ ಶ್ರೀನಿವಾಸ್ ಜೊತೆ ಲಕ್ಷ್ಮಿದೇವಿ ವಿವಾಹ ನಡೆದಿತ್ತು. ಮದುವೆ ಬಳಿಕ ಶ್ರೀನಿವಾಸ್ ಕುಟುಂಬದವರು ವರದಕ್ಷಿಣಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚಂದ್ರಾ ಲೇಔಟ್ನಲ್ಲಿ ದೂರು ದಾಖಲಾಗಿತ್ತು. ಅಭಿನಯಾ ತಾಯಿ ಜಯಮ್ಮ, ಅಭಿನಯಾ ಮತ್ತು ಗಂಡ ಶ್ರೀನಿವಾಸ್ ವಿರುದ್ಧ 2002ರಲ್ಲಿ ಕೇಸು ದಾಖಲಿಸಲಾಗಿತ್ತು. ಹೆರಿಗೆ ಬಳಿಕ ಪತಿ ಮನೆಯವರು ನನ್ನನ್ನು ಸೇರಿಸಿಕೊಳ್ಳಲಿಲ್ಲ. ಪೋಷಕರ ಮನೆಯಲ್ಲಿ ಉಳಿದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಿದರು. ಕೊಲೆ ಬೆದರಿಕೆಯನ್ನೂ ಹಾಕಿದರು ಎಂದು ದೂರಿನಲ್ಲಿ ಲಕ್ಷ್ಮಿದೇವಿ ತಿಳಿಸಿದ್ದರು. ಪ್ರಕರಣದಲ್ಲಿ ಕೆಳ ನ್ಯಾಯಾಲಯದಲ್ಲಿ ಪ್ರಕರಣದ ಬಗ್ಗೆ ತೀರ್ಪು ಆಗಿತ್ತು. ಆನಂತರ, ಹೈಕೋರ್ಟಿಗೆ ಮೇಲ್ಮನವಿ ಆಗಿ ಈಗ ಏಕಸದಸ್ಯ ಪೀಠ ತೀರ್ಪು ನೀಡಿದ್ದು ಅಭಿನಯಾ, ಅವರ ತಾಯಿ ಮತ್ತು ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿದೆ.
Kannada actress Abhinaya (Abhinaya) has been sentenced to 2 years in jail by the High Court for domestic violence and harassing sister-in-law Lakshmidevi’s dowry. A single member bench of the High Court has ordered that Abhinaya’s mother Jayamma be sentenced to 5 years in jail.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm